ಹುಬ್ಬಳಿಯ ಬೈರಿದೇವರಕೊಪ್ಪದಲ್ಲಿರುವ ದರ್ಗಾ ತೆರವು..!
ಹುಬ್ಬಳ್ಳಿ:-
ಭೈರಿದೇವರಕೊಪ್ಪದಲ್ಲಿರುವ ದರ್ಗಾ ತೆರವಿಗೆ ಸಕಲ ಸಿದ್ಧತೆಗಳು ನಡೆದಿವೆ. ರಸ್ತೆ ಅಗಲೀಕರಣ ಹಿನ್ನೆಲೆ ದರ್ಗಾ ತೆರವಿಗೆ ಹೈಕೋರ್ಟ್ ಆದೇಶ ನೀಡಿದ್ದು ಇಂದು ಭೈರಿದೇವರಕೊಪ್ಪದಲ್ಲಿರುವ ದರ್ಗಾ ತೆರವಿಗೆ ಜಿಲ್ಲಾಡಳಿತ ಸಜ್ಜಾಗಿದೆ. ಹೀಗಾಗಿ ಹಜರತ್ ಸೈಯದ್ ಮೆಹಮೂದ್ ಷಾ ಖಾದ್ರಿ ದರ್ಗಾ ಸುತ್ತ ಡಿಸಿಪಿ ಸಾಹಿಲ್ ಬಾಗ್ಲಾ ನೇತೃತ್ವದಲ್ಲಿ ಭದ್ರತೆ ಕೈಗೊಳ್ಳಲಾಗಿದೆ.
ಹುಬ್ಬಳ್ಳಿ-ಧಾರವಾಡ ನಡುವೆ ಬರುವ ಭೈರಿದೇವರಕೊಪ್ಪ ದರ್ಗಾ ರಸ್ತೆ ಅಗಲೀಕರಣಕ್ಕಾಗಿ ಮುಖ್ಯರಸ್ತೆಯಿಂದ 44 ಮೀಟರ್ ಭೂಮಿಯನ್ನಯ BRTS(Bus Rapid Transit System) ವಶಕ್ಕೆ ಪಡೆದಿದೆ. ಭೂಸ್ವಾಧೀನ ಪ್ರಶ್ನಿಸಿ ದರ್ಗಾ ಕಮಿಟಿ ಕೋರ್ಟ್ ಮೆಟ್ಟಿಲೇರಿತ್ತು. ನ್ಯಾಯಾಲಯದಲ್ಲಿ ಸ್ಟೇ ಅವಧಿ ಮುಗಿದ ಹಿನ್ನೆಲೆ ತೆರವು ಮಾಡಲು ಜಿಲ್ಲಾಡಳಿತ ಮುಂದಾಗಿದೆ. ದರ್ಗಾ ಕಮಿಟಿಯ ಸದಸ್ಯರ ಜೊತೆ ಸೌಹಾರ್ದ ತೆರವಿಗೆ ಜಿಲ್ಲಾಡಳಿತ ಮನವಿ ಮಾಡಿದೆ. ಧಾರ್ಮಿಕ ವಿಧಿ ವಿಧಾನಗಳನ್ನು ಅನುಸರಿಸಿ ತೆರವಿಗೆ ಅವಕಾಶ ನೀಡಿದೆ.