ಅಂಬೇಡ್ಕರ್, ಬಸವೇಶ್ವರ ಮತ್ತು ಮಹರ್ಷಿ ವೃತ್ತ ಸಂಬಂಧ – ನಾನಾ ಸಮಾಜದ ಮುಖಂಡರು ಸಭೆಯಲ್ಲಿ ಭಾಗಿ.

ಮಾನ್ವಿ ನ.06

ಮಾನ್ವಿ ‌ಪಟ್ಟಣದ ಮೂಲಕ ರಾಜ್ಯ ಹೆದ್ದಾರಿ ಹಾದು ಹೋಗಿದ್ದರಿಂದ ಕಾಮಗಾರಿ ಪ್ರಾರಂಭವಾಗಿದೆ. ಹೀಗಾಗಿ ಅಂಬೇಡ್ಕರ್, ಬಸವೇಶ್ವರ ಮತ್ತು ಮಹರ್ಷಿ ವಾಲ್ಮೀಕಿ ವೃತ್ತ ನಿರ್ಮಾಣ ಸಂಬಂಧ ಬಾಲಾಜಿ ಕಂಫರ್ಟ್ಟ್ನಲ್ಲಿ ನಾನಾ ಸಮಾಜದ ಮುಖಂಡರ ಸಭೆ ನಡೆಯಿತು.

ಹೊಸಪೇಟೆ ಸೇರಿದಂತೆ ನಾನಾ ಜಿಲ್ಲೆಯಲ್ಲಿ ವೃತ್ತಕ್ಕೆ ಅವಕಾಶ ಕೊಟ್ಟು ರಸ್ತೆ ನಿರ್ಮಾಣ ಮಾಡಿರುವುದು ಉದಾಹರಣೆ ಇದೆ. ಅದೆ ರೀತಿಯಲ್ಲಿ ಮಾನ್ವಿ ಪಟ್ಟಣದಲ್ಲಿ ಅಂಬೇಡ್ಕರ್, ಮಹರ್ಷಿ ಮತ್ತು ಬಸವೇಶ್ವರ ವೃತ್ತವನ್ನು ನಿರ್ಮಾಣ ಮಾಡೋಕೆ ತಾಲೂಕಾಡಳಿತ ಹಾಗೂ ಜಿಲ್ಲಾಡಳಿತ ಅವಕಾಶ ಮಾಡಿ ಕೊಡಬೇಕು ಎಂದು ಮುಖಂಡರು ಅಭಿಪ್ರಾಯ ವ್ಯಕ್ತಪಡಿಸಿದರು.

ಅದೆ ರೀತಿಯಲ್ಲಿ ಕಾನೂನು ಬದ್ಧವಾಗಿ ಹೆದ್ದಾರಿಯ ಅಧಿಕಾರಿಗಳು ಗುರುತಿಸಿದ ಮಾನದಂಡದಂತೆ ರಸ್ತೆ ಅಗಲೀಕರಣ ಮಾಡಬೇಕು. ರಾಜಕಾರಣಿಗಳ ಪಿತೂರಿಯಿಂದ ನಡೆದ ಕಡಿಮೆ ರಸ್ತೆ ಅಗಲೀಕರಣವನ್ನು ಬಿಟ್ಟು ಹೆದ್ದಾರಿ ಪ್ರಾಧಿಕಾರ ಸೂಚಿಸದಂತೆ ರಸ್ತೆ ನಿರ್ಮಾಣ ಮಾಡಬೇಕು ಎಂಬ ಚರ್ಚೆ ನಡೆಯಿತು.

ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಹುಸೇನ್.ಭಾಷಾ.ನಕ್ಕುಂದಿ.ಮಾನ್ವಿ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button