ಆಕಳ ಕರುವಿನ ಮೇಲೆ ಅತ್ಯಾಚಾರವೆಸಗಿದ ವಿಕೃತ ಕಾಮಿ ಇಮ್ತಿಯಾಜ್ ಹುಸೇನ್ ಮಿಯಾ ಬಂಧನ….!

ರಾಯಚೂರು :

ಭಾರತದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ಅಪರಾಧಗಳು ಹೆಚ್ಚುತ್ತಲೇ ಇರುವಾಗ ಈಗ ಪ್ರಾಣಿಗಳೂ ಸುರಕ್ಷಿತವಾಗಿಲ್ಲ. ಹೌದು ನಿಮ್ಮನ್ನು ಬೆಚ್ಚಿ ಬೀಳಿಸುವ ಘಟನೆಯೊಂದು ರಾಯಚೂರು ಜಿಲ್ಲೆಯ ಲಿಂಗಸ್ಗೂರು ತಾಲೂಕಿನ ಕಸಬಾ ಗ್ರಾಮದಲ್ಲಿ ನಡೆದಿದೆ. ಹಸುವಿನ ಕರುವಿನ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 24 ವರ್ಷದ ವಿಕೃತ ಕಾಮಿ ಇಮ್ತಿಯಾಜ್ ಹುಸೇನ್ ಮಿಯಾ ಎಂಬಾತನನ್ನು ಪೊಲೀಸರು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ .

ವೃತ್ತಿಯಲ್ಲಿ ಅಟೋ‌ ಡ್ರೈವರ್ ಆಗಿದ್ದ ಆರೋಪಿ ಇಮ್ತಿಯಾಜ್, ಯಾವಾಗಲು ಮಸೀದಿ ಬಳಿ ಇರುವ ತೋಟದ ಮನೆಯಲ್ಲೇ ಮಲಗುತ್ತಿದ್ದ. ನಿನ್ನೆ ಯಾರೂ ಇಲ್ಲದ ವೇಳೆ ಅಮರೇಶ ಬಸಣ್ಣ ಎಂಬ ವ್ಯಕ್ತಿಗೆ ಸೇರಿದ್ದ ಆಕಳ ಕರುವಿನ ಕಾಲನ್ನು ಮರಕ್ಕೆ ಕಟ್ಟಿ ಹಾಕಿ ಅತ್ಯಾಚಾರ ಎಸಗಿ ವಿಕೃತಿ ಮೆರೆದಿದ್ದಾನೆ. ಸುಮಾರು 7-8 ಆಕಳು ಸಾಕಾಣಿಕೆ ಮಾಡುತ್ತಿದ್ದ ಅಮರೇಶ ಬಸಣ್ಣ ಕೊಟ್ಟಿಗೆಯಲ್ಲಿ ಆಕಳು ಕಟ್ಟಿ ಮನೆಗೆ ಹೋದಾಗ ಘಟನೆ ನಡೆದಿದೆ. ಇಮ್ತಿಯಾಜ್ ನ ಪೈಶಾಚಿಕ ಕೃತ್ಯ ಕಣ್ಣಾರೆ ಕಂಡಿದ್ದ ಅಮರೇಶ ಬಳಿಕ ಇಮ್ತಿಯಾಜ್ ನ ಪೊಲೀಸ್ ಠಾಣೆಗೆ ಒಪ್ಪಿಸಿ ದೂರು ನೀಡಿದ್ದಾರೆ. 

ಸೆಕ್ಷನ್ 377 ಅಡಿಯಲ್ಲಿ ಇಮ್ತಿಯಾಜ್ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಅಲ್ಲದೇ, ಈ ಹಿಂದೆ, ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ಸಮೀಪದ ಗೆಜ್ಜಲಗೆರೆ ಗ್ರಾಮದ ಮಂಜುನಾಥ್ ಎಂಬ 34 ವರ್ಷದ ನಿವಾಸಿ ಹಸುಗಳೊಂದಿಗೆ ಅಸ್ವಾಭಾವಿಕ ಸಂಭೋಗಕ್ಕಾಗಿ ಬಂಧಿಸಲ್ಪಟ್ಟಾಗ ಇದೇ ರೀತಿಯ ಘಟನೆ ಕರ್ನಾಟಕದಿಂದ ವರದಿಯಾಗಿವೆ.

ಈ ಕೃತ್ಯ ಒಂದೇ ಅಲ್ಲ,ಗರ್ಭಿಣಿ ಹಸುವಿನ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 29 ವರ್ಷದ ಪ್ರದ್ಯುತ್ ಭೂಯಾ ಎಂಬ ವ್ಯಕ್ತಿಯನ್ನು ಪಶ್ಚಿಮ ಬಂಗಾಳ ಪೊಲೀಸರು ಬಂಧಿಸಿದ ಕೆಲವೇ ದಿನಗಳಲ್ಲಿ ಈ ಆಘಾತಕಾರಿ ಸುದ್ದಿ ಬಂದಿದೆ. 

ಕೆಲವು ತಿಂಗಳ ಹಿಂದೆ, ಮಹಾರಾಷ್ಟ್ರದ ರತ್ನಾಗಿರಿ ಜಿಲ್ಲೆಯ ಗೋಠಾನೆ ಗ್ರಾಮದ ಬಳಿಯ ಸಹ್ಯಾದ್ರಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ (ಎಸ್‌ಟಿಆರ್) ಬಂಗಾಳ ಮಾನಿಟರ್ ಹಲ್ಲಿಯ ಮೇಲೆ ಅತ್ಯಾಚಾರ ಎಸಗಿದ ನಾಲ್ವರನ್ನು ಬಂಧಿಸಲಾಗಿತ್ತು.

 

 

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Your email address will not be published. Required fields are marked *

Back to top button