ಪ್ರಥಮ ಬಾರಿಗೆ ಜನತಾ ದರ್ಶನ ಕಾರ್ಯಕ್ರಮ.

ಹೊಸಪೇಟೆ ಸಪ್ಟೆಂಬರ್.26

ವಿಜಯನಗರ ಜಿಲ್ಲೆಯ ನೂತನವಾಗಿ 31ನೇ ಜಿಲ್ಲೆಯಾಗಿರುವ ವಿಜಯನಗರದ ಹೊಸಪೇಟೆ ತಾಲೂಕಿನ ಪುನೀತ್ ರಾಜಕುಮಾರ್ ಒಳಾಂಗಣ ಕ್ರಿಡಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇವರ ಸೂಚನೆಯಂತೆ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಅವರು ಜನತಾದರ್ಶನದ ಉದ್ಘಾಟನೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಚಿವರ ಜೊತೆಗೆ ಸ್ಥಳೀಯ ಶಾಸಕರಾದ ಎಚ್ ಆರ್ ಗವಿಯಪ್ಪ, ಮತ್ತು ಜಿಲ್ಲಾಧಿಕಾರಿಗಳು ಸಾರ್ವಜನಿಕರ ಆಹವಾಲಗಳನ್ನು ಸ್ವೀಕರಿಸಿದರು.ಪ್ರತಿ ತಿಂಗಳು ತಾಲೂಕವಾರು ಜನತಾ ದರ್ಶನ ಮಾಡಲು ಇಂಗಿತ ವ್ಯಕ್ತಪಡಿಸಿದ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಜಮೀರ್ ಅಹ್ಮದ್ ಖಾನ್ಆರೋಗ್ಯ ಇಲಾಖೆಯ ವತಿಯಿಂದ ಡೆಂಗ್ಯೂ ರಥ ಚಾಲನೆಯನ್ನು ನೀಡಿದರು ಡೆಂಗ್ಯೂ ಮಲೇರಿಯಾ ಮತ್ತು ಚಿಕನ್ ಗುನ್ಯ ರೋಗದ ಬಗ್ಗೆ ಜಾಗೃತಿ ನೀಡುವ ರಥ ವಾಗಿದೆ.ಇನ್ನೂ ಸಾರ್ವಜನಿಕ ಆಹವಾಲುಗಳನ್ನು ಸ್ವೀಕರಿಸಲು ಜಿಲ್ಲಾ ಆಡಳಿತ 20 ಕೌಂಟರ್ ಗಳನ್ನು ನಿರ್ಮಿಸಿತ್ತು, ಕಂದಾಯ ಇಲಾಖೆ ಸೇರಿದಂತೆ ಭೂ ದಾಖಲೆ, ಆಹಾರ ಮತ್ತು ನಾಗರಿಕ ಸರಬರಾಜು, ಆರೋಗ್ಯ ಇಲಾಖೆ.ಪೋಲಿಸ್.ಇಲಾಖೆ. ಮಹಿಳಾ ಮತ್ತು ಮಕ್ಕಳ ಕುಟುಂಬ ಕಲ್ಯಾಣ ಇಲಾಖೆ. ಜಿಲ್ಲಾ ನೋಂದಣಿ, ಗ್ರಾಮೀಣಾ ಭಿವೃದ್ಧಿ, ಗ್ರಾಮೀಣ ಕುಡಿಯುವ ನೀರು ಸರಬರಾಜು, ಕೃಷಿ, ತೋಟಗಾರಿಕೆ, ಮೀನುಗಾರಿಕೆ ಮತ್ತು ಪಶುಸಂಗೋಪನೆ, ಅರಣ್ಯ, ಅಬಕಾರಿ, ಗಣಿ ಮತ್ತು ಭೂವಿಜ್ಞಾನ, ಹಿಂದುಳಿದ ವರ್ಗಗಳ ಕಲ್ಯಾಣ, ಸಮಾಜ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ,ಪ್ರತಿ ಇಲಾಖೆಗೆ ಪ್ರತ್ಯೇಕ ಕೌಂಟರ್ ಗಳು ಇದ್ದವು. ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿ ಕ್ರಿಯಾಶೀಲಗೊಳಿಸುವ ಪ್ರಯತ್ನವಾಗಿ ನಡೆಸಿದ ಜಿಲ್ಲಾ ಆಡಳಿತ. ಆಹವಾಲುಗಳನ್ನು ಆಲಿಸಿ, ಸೂಕ್ತ ಪರಿಹಾರವನ್ನು ಒದಗಿಸುವ ಸಲುವಾಗಿ ಮೊಟ್ಟಮೊದಲ ಬಾರಿಗೆ ಜಿಲ್ಲಾ ಮಟ್ಟದಲ್ಲಿಯೇ ಜನತಾ ದರ್ಶನ ನಡೆಸಲಾಗಿದೆ.

ರಾಜ್ಯದಲ್ಲಿ

ಪ್ರಥಮ ಬಾರಿಗೆ ಜನತಾ ದರ್ಶನ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಜಮೀರ್ ಅಹ್ಮದ್ ರವರ ಭಾಷಣ..

31ನೇ ಜಿಲ್ಲೆಯಾಗಿ ಹೊರಹೊಮ್ಮಿರುವ ವಿಜಯನಗರ ಜಿಲ್ಲೆಯಲ್ಲಿ ಸಾರ್ವಜನಿಕರ ಆಹವಾಲುಗಳನ್ನು ಆಲಿಸಿ, ಸೂಕ್ತ ಪರಿಹಾರವನ್ನು ಒದಗಿಸುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದಲ್ಲಿಯೇ ಸೋಮವಾರ ಹಮ್ಮಿಕೊಂಡಿದ್ದ ವಿಜಯನಗರ ಜಿಲ್ಲೆಯ ಒಳ ಕ್ರೀಡಾಂಗಣದಲ್ಲಿ ಜನತಾ ದರ್ಶನಕ್ಕೆ ಜಿಲ್ಲೆಯ ವಿವಿಧ ಭಾಗಗಳಿಂದ ಸಾರ್ವಜನಿಕರು ಬಂದು ತಮ್ಮ ಸಮಸ್ಯೆಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವರಿಗೆ ಅಹವಾಲು ಸಲ್ಲಿಸಿದರು. ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದ ಸಚಿವರು ಇದಕ್ಕೆ ಕೂಡಲೇ ಸೂಕ್ತ ಪರಿಹಾರವನ್ನು ಒದಗಿಸುವುದಾಗಿ ಆಶ್ವಾಸನೆ ನೀಡಿದರು. ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ ಅದಕ್ಕೆ ಸೂಕ್ತ ಪರಿಹಾರ ಒದಗಿಸುವ ಸಲುವಾಗಿ ಜನತಾ ದರ್ಶನ ನಡೆಸಲಾಗುತ್ತದೆ. ಬೆಂಗಳೂರಿನಲ್ಲಿ ಮಾತ್ರ ನಡೆಯುತ್ತಿದ್ದ ಜನತಾ ದರ್ಶನ ರಾಜ್ಯದಲ್ಲಿ ಪ್ರಥಮ ಬಾರಿಗೆ ಎಲ್ಲಾ ಜಿಲ್ಲಾ ಕೇಂದ್ರಗಳಿಗೂ ಏಕಕಾಲಕ್ಕೆ ವಿಸ್ತರಣೆಯಾಗಿದೆ ಈ ಕಾರ್ಯಕ್ರಮಕ್ಕೆ ಮಹಿಳೆಯರು, ಪುರುಷರು, ಅಂಗವಿಕಲರು, ದೇವದಾಸಿ ಹೆಣ್ಣ ಮಕ್ಕಳು, ಮಂಗಳಮುಖಿಯರು, ವೃದ್ದರು ಆಗಮಿಸಿದ್ದರು.

ತಾಲೂಕ ವರದಿಗಾರರು;ಮಾಲತೇಶ್.ಶೆಟ್ಟರ್.ಹೊಸಪೇಟೆ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.
Back to top button