‘ಕುಣಿಲಾರದ ಸೂ… ನೆಲ ಡೊಂಕು ಅಂದಳಂತೆ’:- ಎಸ್.ಟಿ ಸೋಮಶೇಖರ್ ವಿವಾದಾತ್ಮಕ ಹೇಳಿಕೆ…!
ಫೈವ್ ಸ್ಟಾರ್ ಹೋಟೆಲ್ನಲ್ಲಿ ಕುಳಿತು ಹೆಚ್ಡಿ ಕುಮಾರಸ್ವಾಮಿ ಅಧಿಕಾರ ನಡೆಸಿದ್ದರಿಂದ ನಾವು ಪಕ್ಷ ಬಿಡಬೇಕಾಯಿತು ಎಂದು ಎಸ್.ಟಿ ಸೋಮಶೇಖರ್ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದರು .
ಮೈಸೂರು :
ಮಾಜಿ ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ ವಿರುದ್ಧ “ಕುಣಿಲಾರದ ಸೂ… ನೆಲ ಡೊಂಕು ಅಂದಳಂತೆ” ಎಂಬ ಆಕ್ಷೇಪಾರ್ಹ ಹೇಳಿಕೆ ನೀಡುವ ಮುಖಾಂತರ ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ವಿವಾದಕ್ಕೆ ಈಡಾದರು. ಮುಂಬೈಗೆ ತೆರಳಿದ್ದ 17 ಶಾಸಕರ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದು, ಇದಕ್ಕೆ ತಿರುಗೇಟಾಗಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಸೋಮಶೇಖರ್ ಹೆಚ್.ಡಿ.ಕುಮಾರಸ್ವಾಮಿಗೆ ಮೂರು ವರ್ಷ ಏನೂ ಮಾಡಲು ಆಗಲಿಲ್ಲ. ಚುನಾವಣೆ ಹತ್ತಿರಬಂದಾಗ ಗೆಲ್ಲಲು ಆಗಲ್ಲವೆಂದು ಈ ವಿಚಾರ ಪ್ರಸ್ತಾಪ ಮಾಡಿದ್ದಾರೆ ಎಂದು ವಾಗ್ದಾಳಿ ಮಾಡಿದ್ದಾರೆ. ಈ ಮೂಲಕ ವಿವಾದವನ್ನು ತಮ್ಮ ಮೇಲೆ ಎಳೆದುಕೊಂಡಿದ್ದಾರೆ , ಇನ್ನು ಇದಕ್ಕೆ ಉಳಿದ ಸಚಿವರು ಯಾವ ರೀತಿ ತಿರುಗೇಟು ನೀಡುತ್ತಾರೆ ಎಂದು ನೋಡಬೇಕಾಗಿದೆ.
ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವ ಎಸ್.ಟಿ.ಸೋಮಶೇಖರ್ ಫೈವ್ ಸ್ಟಾರ್ ಹೋಟೆಲ್ನಲ್ಲಿ ಕುಳಿತು ಹೆಚ್ಡಿ ಕುಮಾರಸ್ವಾಮಿ ಅಧಿಕಾರ ನಡೆಸಿದರು. ಈ ಒಂದೇ ಕಾರಣಕ್ಕೆ ನಾವು ಪಕ್ಷ ಬಿಡಬೇಕಾಯಿತು. ಅಂದು ನೀವು ಸರಿಯಾಗಿದ್ದರೆ ಮುಖ್ಯಮಂತ್ರಿಯಾಗಿ 5 ವರ್ಷ ಪೂರೈಸಬಹುದಿತ್ತು.
ತಪ್ಪುಗಳನ್ನು ಮುಚ್ಚಿಕೊಳ್ಳಲು ಚುನಾವಣೆ ಸಮಯದಲ್ಲಿ ಈ ಬಗ್ಗೆ ಪ್ರಸ್ತಾಪ ಮಾಡುತ್ತಿದ್ದಾರೆ. ಆರೋಪ ಮಾಡುವವರು ಬರವಣಿಗೆಯಲ್ಲಿ ದೂರನ್ನು ಸಿಎಂಗೆ ನೀಡಲಿ ಎಂದು ಸೋಮಶೇಖರ್ ಹೇಳಿದರು. ಮುಖ್ಯಮಂತ್ರಿಗಳ ಪರಮಾಧಿಕಾರದಲ್ಲಿ ಯಾವ ತನಿಖೆ ಬೇಕಾದರೂ ಆಗಲಿ ಎಂದರು.