ಅಪರಾಧ ತಡೆಗೆ ಸಹಕಾರ ಅಗತ್ಯ – ಪರಿ.ಎಸ್.ಐ ತಾರಾಬಾಯಿ.

ಮಸ್ಕಿ ಆ.19

ಸಮಾಜದಲ್ಲಿ ನಡೆಯುವ ಅನ್ಯಾಯ, ಅಪರಾಧಗಳಂತಹ ಪ್ರಕರಣಗಳ ಕಡಿವಾಣಕ್ಕೆ ಪ್ರತಿಯೊಬ್ಬರ ಸಹಕಾರ ಅಗತ್ಯವಾಗಿದೆ ಎಂದು ಪಿಎಸ್‌ಐ ತಾರಾಬಾಯಿ ಅವರು ಹೇಳಿದರು. ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ಪಟ್ಟಣದ ಸರಸ್ವತಿ ವಿದ್ಯಾ ನೀಕೇತನ ಶಾಲೆಯ ವಿದ್ಯಾರ್ಥಿಗಳಿಗೆ ತೆರೆದ ಮನೆ ಕಾನೂನು ಅರಿವು ಮತ್ತು ಆಯುಧಗಳ ಪರಿಚಯ ಹಾಗೂ ಪೊಲೀಸರು ಕಾರ್ಯ ನಿರ್ವಹಣೆ ಕುರಿತು ಮಾಹಿತಿ ನೀಡಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸ್ ಎಂದರೆ ಭಯ ಪಡುವ ಅಗತ್ಯವಿಲ್ಲ, ಸಮಾಜದಲ್ಲಿ ನಡೆಯುವ ಅಹಿತಕರ ಘಟನೆ ಸೇರಿದಂತೆ ಅಕ್ರಮ ಚಟುವಟಿಕೆಗಳು ಕುರಿತು ಪೊಲೀಸರಿಗೆ ಮಾಹಿತಿ ನೀಡಲು ಪ್ರತಿಯೊಬ್ಬ ನಾಗರೀಕನು ಸಹಕರಿಸಬೇಕು ಎಂದರು. ಈ ಸಂದರ್ಭದಲ್ಲಿ ಎ.ಎಸ್‌.ಐ ಹುಲುಗಪ್ಪ, ಶಾಲೆಯ ಅಧ್ಯಕ್ಷ ಸಿದ್ದರಾಮ ಗಡ್ಡಿಮಠ, ಅಪರಾಧ ವಿಭಾಗದ ಪಿ.ಎಸ್‌.ಐ ಭೀಮದಾಸ್, ಪೊಲೀಸ್ ಸಿಬ್ಬಂದಿ, ವಿದ್ಯಾರ್ಥಿಗಳಿದ್ದರು.

ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಪ್ರತಾಪ್.ವಾಯ್.ಕಿಳ್ಳಿ. ಇಲಕಲ್ಲ.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button