ಪ್ರಬಂಧ ಸ್ಪರ್ಧೆಯಲ್ಲಿ ಪೂಜಾ ಸಾರವಾಡ ಪ್ರಥಮ.
ಇಂಡಿ ಜನೇವರಿ.28

ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಬಿ.ಎ ಅಂತಿಮ ವರ್ಷದ ವಿದ್ಯಾರ್ಥಿನಿ ಪೂಜಾ ಸಾರವಾಡ ಇವರು ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ರಾಜ್ಯ ಸ್ವೀಪ್ ಸಮಿತಿ, ಬೆಂಗಳೂರು ಇವರ ಅಡಿಯಲ್ಲಿ ನಡೆದ 2023-24 ನೇ ಸಾಲಿನ ಪ್ರಬಂಧ ಸ್ಪರ್ಧೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು, ಜ. 25 ರಂದು ಬೆಂಗಳೂರಿನಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಗೌರವಾನ್ವಿತ ರಾಜ್ಯಪಾಲರಾದ ಥಾವರಚಂದ ಗ್ಲೇಹೊಟ್ ಅವರಿಂದ ಪ್ರಶಸ್ತಿ ಪಡೆದು ತಾಲೂಕಿನ ಹಾಗೂ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ.ಇಂಡಿಯ ಶಾಸಕ ಮತ್ತು ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಯಶವಂತರಾಯಗೌಡ ಪಾಟೀಲ ಮತ್ತು ಕಾಲೇಜಿನ ಪ್ರಾಚಾರ್ಯ ಆರ್.ಎಚ್.ರಮೇಶ ಹಾಗೂ ಸಿಬ್ಬಂದಿಯವರು ವಿದ್ಯಾರ್ಥಿನಿಗೆ ಶುಭ ಹಾರೈಸಿದ್ದಾರೆ.
ಜಿಲ್ಲಾ ವರದಿಗಾರರು:ಶಿವಪ್ಪ.ಬಿ.ಹರಿಜನ.ಇಂಡಿ