ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿರುವ ತಮಿಳು ನಟ ವಿಜಯ್ ; ಮಲೇಷಿಯಾಗೆ ಹಾರಿದ ಕುಟುಂಬ…!
‘ಪಿಚ್ಚೈಕಾರನ್ 2 (Picchaikaran 2) ‘ಸಿನಿಮಾದ ಶೂಟಿಂಗ್ ವೇಳೆ ದೋಣಿ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ತಮಿಳಿನ ಖ್ಯಾತ ನಟ ವಿಜಯ್ ಆಂಟನಿ (Vijay Antony) ಸ್ಥಿತಿ ಗಂಭೀರವಾಗಿದೆ.
‘ಪಿಚ್ಚೈಕಾರನ್ 2’ ಸಿನಿಮಾದ ಶೂಟಿಂಗ್ ದೋಣಿಯೊಂದರಲ್ಲಿ ನಡೆಯುತ್ತಿದ್ದ ಸಾಹಸ ಸನ್ನಿವೇಶದ ದೃಶ್ಯದಲ್ಲಿ ದೋಣಿ ಅಪಘಾತಕ್ಕೀಡಾಗಿದ್ದ ಅವರನ್ನು ಕೂಡಲೇ ವಿಜಯ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು .
ವಿಜಯ್ ಆಂಟೋನಿ 2016 ರಲ್ಲಿ ಟಾಪ್ 10 ಅತ್ಯಂತ ಯಶಸ್ವಿ ತಮಿಳು ನಟರಲ್ಲಿ ಮೂರನೇ ಸ್ಥಾನದಲ್ಲಿ ಗಮನ ಇಡೀ ತಮಿಳ್ ಇಂಡಸ್ಟ್ರಿ ಯಲ್ಲಿ ತಮ್ಮ ಛಾಪು ಮೂಡಿಸಿದ್ದರು.
ಕೋಮಾ ಸ್ಥಿತಿಗೆ ನಟ ವಿಜಯ್ ಜಾರಿದ್ದಾರೆ ಅಂತ ವರದಿಯಾಗ್ತಿದೆ. ಅವರ ಗಲ್ಲಕ್ಕೆ ಹೆಚ್ಚಿನ ಗಾಯವಾಗಿದ್ದು, ಮುಖದ ಗುರುತೇ ಸಿಗದಂತಾಗಿದೆ ಎಂದು ಹೇಳಲಾಗ್ತಿದೆ. ಈ ವಿಚಾರ ತಿಳಿದ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ.ವಿಜಯ್ ಆಂಟನಿ ಅವರನ್ನು ಮಲೇಷ್ಯಾದಿಂದ ಚೆನ್ನೈಗೆ ಕರೆತಂದು ಚಿಕಿತ್ಸೆ ನೀಡಲಾಗುತ್ತಿತ್ತು. ವಿಜಯ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿತ್ತು ಎಂದು ಹೇಳಲಾಗಿತ್ತು. ಆದರೆ ಈಗಿನ ಮಾಹಿತಿ ಪ್ರಕಾರ ಇನ್ನೂ ಕೋಮಾ ಸ್ಥಿತಿಯಲ್ಲಿ ಇದ್ದಾರೆ ಅಂತ ವರದಿಯಾಗಿದೆ.
ಮಲೇಷ್ಯಾದ ಆಸ್ಪತ್ರೆಯಲ್ಲಿ ವಿಜಯ್ ಅವರಿಗೆ ಐಸಿಯುನಲ್ಲಿರಿಸಿ ಚಿಕಿತ್ಸೆ ನೀಡಲಾಗಿತ್ತು. ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿರುವ ವಿಷಯ ತಿಳಿಯುತ್ತಿದ್ದಂತೆಯೇ ವಿಜಯ್ ಕುಟುಂಬ ಮಲೇಷ್ಯಾಗೆ ಪ್ರಯಾಣ ಬೆಳೆಸಿತ್ತು,ಚಿತ್ರೀಕರಣದಲ್ಲಿ ಭಾಗಿಯಾಗಿದ್ದವರ ಹೇಳಿಕೆಯ ಪ್ರಕಾರ, ‘ಸಮುದ್ರ ಮಧ್ಯ ದೋಣಿಯಲ್ಲಿ ಚಿತ್ರೀಕರಣ ಮಾಡಲಾಗುತ್ತಿತ್ತು. ಒಂದು ದೋಣಿ ಮತ್ತೊಂದು ದೋಣಿಯನ್ನು ಅಟ್ಟಿಸಿಕೊಂಡು ಬರುವ ದೃಶ್ಯ ಅದಾಗಿತ್ತು .ರಭಸವಾಗಿ ದೋಣಿಗಳು ಬರುವ ವೇಳೆಯಲ್ಲಿ ಒಂದು ದೋಣಿ ನಿಯಂತ್ರಣ ತಪ್ಪಿ ಮತ್ತೊಂದು ದೋಣಿಗೆ ಢಿಕ್ಕಿ ಹೊಡೆದಿದೆ. ಈ ವೇಳೆ ವಿಜಯ್ ಆಂಟನಿ ತೀವ್ರವಾಗಿ ಗಾಯಗೊಂಡಿದ್ದರು .ಮಲೇಷ್ಯಾದ ಆಸ್ಪತ್ರೆಯಲ್ಲಿ ವಿಜಯ್ ಅವರಿಗೆ ಐಸಿಯುನಲ್ಲಿರಿಸಿ ಚಿಕಿತ್ಸೆ ನೀಡಲಾಗಿತ್ತು. ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿರುವ ವಿಷಯ ತಿಳಿಯುತ್ತಿದ್ದಂತೆಯೇ ವಿಜಯ್ ಕುಟುಂಬ ಮಲೇಷ್ಯಾಗೆ ಪ್ರಯಾಣ ಬೆಳೆಸಿತ್ತು ಸದ್ಯ ವಿಜಯ್ ಅವರನ್ನು ಚೆನ್ನೈಗೆ ಕರೆತಂದು ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೊದಲು ಸ್ಥಿತಿ ಚಿಂತಾಜನಕವಾಗಿದ್ದರಿಂದ ವಿಜಯ್ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.