ಸಚಿವ ಅಶ್ವಥ್ ನಾರಾಯಣರನ್ನು ಬಂಧಿಸಿ — ಜಗದೀಶ್…….!

ತರಿಕೆರೆ (ಫೆಬ್ರವರಿ .16) :

ಮಂಡ್ಯ ಜಿಲ್ಲೆಯಲ್ಲಿ ನಡೆದ ಬಿಜೆಪಿ ಕಾರ್ಯಕರ್ಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಒಡೆದು ಹಾಕಬೇಕು ಎಂದು ಹೇಳಿರುವ ಉನ್ನತ ಶಿಕ್ಷಣ ಸಚಿವರಾದ ಅಶ್ವತ್ ನಾರಾಯಣ ರವರನ್ನು, ಬಂಧಿಸಿ ಕಾನೂನು ರೀತಿ ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ಪಕ್ಷದ ಸೇವಾದಳದ ಅಧ್ಯಕ್ಷರಾದ ಟಿ ಎನ್ ಜಗದೀಶ್ ರವರು ತರೀಕೆರೆ ಪೊಲೀಸ್ ನಿರೀಕ್ಷಕರಾದ ರವೀಂದ್ರ ರವರಿಗೆ ದೂರು ನೀಡಿ ಸುದ್ದಿಗಾರರೊಂದಿಗೆ ಮಾಹಿತಿ ಹಂಚಿಕೊಂಡರು.

ಸ್ವಾತಂತ್ರ ಹೋರಾಟಗಾರರಾದ, ಮೈಸೂರಿನ ಹುಲಿ ಎಂದೇ ಪ್ರಖ್ಯಾತರಾಗಿರುವ ಟಿಪ್ಪು ಸುಲ್ತಾನ್ ರವರನ್ನು ಹೊಡೆದು ಕೊಲೆ ಮಾಡಿರುವ ರೀತಿಯಲ್ಲಿ ಸಿದ್ದರಾಮಯ್ಯ ಅವರನ್ನೂ ಹೊಡೆದು ಹಾಕಬೇಕು ಎಂದು ಪ್ರಚೋದನಕಾರಿ ಕೊಲೆ ಬೆದರಿಕೆ ಹೇಳಿಕೆ ನೀಡಿರುವ, ಸಚಿವ ಅಶ್ವಥ್ ನಾರಾಯಣರವರ ಮೇಲೆ ಕಾನೂನು ರೀತಿ ಕ್ರಮ ಜರುಗಿಸಿ, ಬಂಧಿಸಿ, ಶಿಕ್ಷೆಗೆ ಗುರಿಪಡಿಸಬೇಕೆಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಕಸಬಾ ಹೋಬಳಿ ಕಾಂಗ್ರೆಸ್ ಅಧ್ಯಕ್ಷರಾದ ವೀರಮಣಿ, ಮಾಜಿ ಪುರಸಭಾ ಸದಸ್ಯರಾದ ಜಯಕುಮಾರ್, ಕಾಂಗ್ರೆಸ್ ಸೇವಾದಳದ ಉಪಾಧ್ಯಕ್ಷರಾದ ದೇವರಾಜ್, ಎನ್ಎಸ್ ವೈ ಕಾರ್ಯದರ್ಶಿ ರವಿ, ಮಂಜು, ಬರಗೇನಹಳ್ಳಿ ಗ್ರಾಮ ಪಂಚಾಯತಿ ಸದಸ್ಯರಾದ ದಿನೇಶ್, ಮುಂತಾದವರು ಇದ್ದರು.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button