ಕನ್ನಡ ಸಾಹಿತ್ಯ ಪರಿಷತ್ತಿನ ಅಜೀವ ಸದಸ್ಯರು & ಹಿರಿಯ ಮುಂಖಡರನ್ನು ಕಡೆಗಣೆನೆ ಎನ್ ರಾಜುರವರು ಆಪಾದನೆ….!

ಚಿಕ್ಕಮಗಳೂರು(ಫೆ.24) :

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪ್ರವಾಸಿ ಮಂದಿರದಲ್ಲಿ ಹಿರಿಯ ಪತ್ರಕರ್ತರಾದ ಎನ್ ರಾಜುರವರು ಪತ್ರಿಕಾಗೋಷ್ಠಿ ನಡೆಸಿ ಕನ್ನಡ ಸಾಹಿತ್ಯ ಪರಿಷತ್ತು ಕೆಲವೇ ಕೆಲವರ ಸೊತ್ತಾಗಾಬಾರದು. ಅಜೀವ ಸದಸ್ಯರು ಮತ್ತು ಹಿರಿಯ ಮುಖಂಡರನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿದರು. ಕನ್ನಡ ಸಾಹಿತ್ಯ ಪರಿಷತ್ತು, ಕಾರ್ಪೊರೇಷನ್ ಸಂಸ್ಥೆ ಆಗಬಾರದು, ತರೀಕೆರೆ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಎಲ್ಲರನ್ನು ಒಟ್ಟುಗೂಡಿಸಿಕೊಂಡು ಕಾರ್ಯಕ್ರಮ ಮಾಡಬೇಕು ತಪ್ಪಿದ್ದಲ್ಲಿ ಕಾರ್ಯಕ್ರಮದ ವಿರುದ್ಧ ಪ್ರತಿಭಟನೆ ಮಾಡುವುದಾಗಿ ತಿಳಿಸಿದರು.

ಸಾಹಿತ್ಯ ಪರಿಷತ್ತು ರಾಜಕಾರಣಿಗಳ ಪ್ರಚಾರಕ್ಕೆ ವಸ್ತುವಾಗಬಾರದು ಕನ್ನಡ ನಾಡು ನುಡಿ ಸಾಹಿತ್ಯ, ಅಭಿವೃದ್ಧಿಗೆ ಪೂರಕವಾಗಿರಬೇಕು ಎಂದು ಆಗ್ರಹಿಸಿದರು ಈ ಸಂದರ್ಭದಲ್ಲಿ ವಕೀಲರಾದ ಎಸ್ ಸುರೇಶ್ ಚಂದ್ರ, ಕುರುಬ ಸಮಾಜದ ಮುಖಂಡರಾದ ಹಾಲು ವಜ್ರಪ್ಪ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರಾದ ಟಿಎಲ್ ರಮೇಶ್ ಪುರಸಭಾ ಮಾಜಿ ಸದಸ್ಯರಾದ ಬಸವರಾಜ್, ಬಿಜೆಪಿ ಮುಖಂಡರಾದ ಸದಾನಂದ, ಜಯಣ್ಣ,,ಹರಳಪ್ಪ , ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Your email address will not be published. Required fields are marked *

Back to top button