ಕನಸಿನಲ್ಲಿಯೂ ನೀವು ವೀರ್ ಸಾವರ್ಕರ್ ಆಗಲು ಸಾಧ್ಯವಿಲ್ಲ: ರಾಹುಲ್ ಗಾಂಧಿ ಟಾಂಗ್ ಕೊಟ್ಟ ಅನುರಾಗ್ ಠಾಕೂರ್

ರಾಹುಲ್ ಗಾಂಧಿ ನನ್ನ ಹೆಸರು ಸಾವರ್ಕರ್ ಅಲ್ಲ, ನಾನು ಯಾರಿಗೂ ಕ್ಷಮೆ ಕೇಳಲ್ಲ ಎಂದಿದ್ದರು. ಈ ವಿಚಾರವಾಗಿ ಕೇಂದ್ರ ಸಚಿವ ಅನುರಾಗ್ ಠಾಕೂರ್ ಭಾನುವಾರ ಸಾಲು ಸಾಲು ಟ್ವೀಟ್ ಮಾಡುವ ಮೂಲಕ ಕಿಡಿಕಾರಿದ್ದಾರೆ.
ದೆಹಲಿ: ಸಂಸತ್ತಿನಿಂದ ಅನರ್ಹಗೊಳಿಸಿದ ಒಂದು ದಿನದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ ನನ್ನ ಹೆಸರು ಸಾವರ್ಕರ್ (Savarkar) ಅಲ್ಲ, ನಾನು ಯಾರಿಗೂ ಕ್ಷಮೆ ಕೇಳಲ್ಲ ಎಂದಿದ್ದರು. ಈ ವಿಚಾರವಾಗಿ ಕೇಂದ್ರ ಸಚಿವ ಅನುರಾಗ್ ಠಾಕೂರ್ ಭಾನುವಾರ ಸಾಲು ಸಾಲು ಟ್ವೀಟ್ ಮಾಡುವ ಮೂಲಕ ಕಿಡಿಕಾರಿದ್ದಾರೆ.
ಪ್ರೀತಿಯ ಗಾಂಧಿ ಅವರೇ, ನಿಮ್ಮ ಅತ್ಯುತ್ತಮ ಕನಸಿನಲ್ಲಿಯೂ ಸಹ ನೀವು ಸ್ವಾತಂತ್ರ್ಯ ವೀರ್ ಸಾವರ್ಕರ್ ಆಗಲು ಸಾಧ್ಯವಿಲ್ಲ. ಏಕೆಂದರೆ ಸಾವರ್ಕರ್ ಆಗಲು ಬಲವಾದ ಸಂಕಲ್ಪ, ಭಾರತದ ಮೇಲೆ ಪ್ರೀತಿ, ನಿಸ್ವಾರ್ಥತೆ ಮತ್ತು ಬದ್ಧತೆಯ ಅಗತ್ಯವಿದೆ. ನೀವು ಸಾವರ್ಕರ್ ಆಗಲು ಸಾಧ್ಯವೇ ಇಲ್ಲ ಎಂದಿದ್ದಾರೆ. ಆ ಮೂಲಕ ನಿಮಗೂ ಮತ್ತು ಸಾವರ್ಕರ್ ಅವರಿಗೆ ಹೋಲಿಕೆ ಸಲ್ಲ ಎಂದು ಹೇಳಿದ್ದಾರೆ.
ರಾಹುಲ್ ಗಾಂಧಿ ದಿವಂಗತ ಪ್ರಧಾನಿ ಇಂದಿರಾಗಾಂಧಿ ಅವರು ಸಾವರ್ಕರ್ ಅವರಿಗೆ ಗೌರವಾರ್ಥವಾಗಿ ಬರೆದಿರುವ ಪತ್ರವನ್ನು ನೆನಪಿಸಿದ್ದಾರೆ. ಸಾವರ್ಕರ್ ಬ್ರಿಟಿಷರ ನೆಲದಲ್ಲಿ ಹೋಗಿ ಭಾರತಿಯರನ್ನು ಗುಲಾಮಗಿರಿಯಿಂದ ಮುಕ್ತಗೊಳಿಸಲು ಹೋರಾಡಿದ್ದಾರೆ.
ಆದರೆ ರಾಹುಲ್ ಗಾಂಧಿ ವರ್ಷದ 6 ತಿಂಗಳು ರಜೆಗಾಗಿ ವಿದೇಶಕ್ಕೆ ಹೋಗಿ ದೇಶದ ವಿರುದ್ಧ ವಿದೇಶಿಯರ ಬಳಿ ಸಹಾಯ ಪಡೆಯುತ್ತಾರೆ. ಈ ನಿಟ್ಟಿನಲ್ಲಿ ತಮ್ಮ ಅಜ್ಜಿ ಬರೆದಿರುವ ಪತ್ರವನ್ನು ಓದಬೇಕು. ಇದರಿಂದ ನಿಮ್ಮ ತರ್ಕಕ್ಕೆ ಉತ್ತರ ಸಿಗುತ್ತದೆ ಎಂದು ವಾಗ್ದಾಳಿ ಮಾಡಿದ್ದಾರೆ.