ಬಿಜೆಪಿ ಅಭ್ಯರ್ಥಿಯಾಗಿ ಇಂದು ಶ್ರೀ ಕಾಸುಗೌಡ ಬಿರಾದಾರ ನಾಮಪತ್ರ ಸಲ್ಲಿಕೆ

ಇಂಡಿ ಏ.19

ಇಂದು ಇಂಡಿ ಮತಕ್ಷೇತ್ರದ ಬಿಜೆಪಿ ಅಧಿಕೃತವಾಗಿ ಅಭ್ಯರ್ಥಿಯಾಗಿ ಶ್ರೀ ಕಾಸುಗೌಡ ಬಿರಾದಾರ ಅವರು ಇಂದು ತಮ್ಮ ನಾಮಪತ್ರ ಸಲ್ಲಿಸಿದರು. ಅವರು ಇಂದು ಬೆಳಗ್ಗೆ 10-00 ಗಂಟೆಗೆ ಇಂಡಿ ನಗರದ ಆರಾಧ್ಯ ದೈವ ಶ್ರೀ ಶಾಂತೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.ನಂತರ ತಮ್ಮ ಅಪಾರ ಪ್ರಮಾಣದ ಬೆಂಬಲಿಗರೊಂದಿಗೆ ಶ್ರೀ ಛತ್ರಪತಿ ಶಿವಾಜಿ ವೃತ್ತದಿಂದ ನಗರ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಡೊಳ್ಳಿನ ಕುಣಿತ, ವಾದ್ಯ, ವೃಂದ, ಸಂಗೀತ, ನೃತ್ಯದೊಂದಿಗೆ, ಕಾರ್ಯಕರ್ತರ ಜೈಕಾರದೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮಿನಿ ವಿಧಾನಸೌಧ ತಲುಪಿತು,ನಂತರ ಇಂಡಿ ಮತಕ್ಷೇತ್ರದ ಚುನಾವಣೆಯ ಅಧಿಕಾರಿ ಹಾಗೂ ಇಂಡಿ ಉಪವಿಭಾಗಾಧಿಕಾರಿ ಶ್ರೀ ರಾಮಚಂದ್ರ ಗಡದೆ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಉತ್ತರ ಕರ್ನಾಟಕ ರಾಜ್ಯದ ಉಸ್ತುವಾರಿ ಹಾಗೂ ಉತ್ತರಾಖಂಡ ಸಚೀವರಾದ ರಾವತ್ ಸಿಂಗ್,ವಿಜಯಪೂರ ಲೋಕಸಭಾ ಸದಸ್ಯರಾದ ಶ್ರೀ ರಮೇಶ ಜಿಗಜಿಣಗಿ,ಮಾಜಿ ಶಾಸಕರಾದ ಶ್ರೀ ಡಾ.ಸಾರ್ವಭೌಮ ಬಗಲಿ, ಬಿಜೆಪಿ ಮುಖಂಡರಾದ ದಯಾಸಾಗರ ಪಾಟೀಲ, ಶಂಕರಗೌಡ ಪಾಟೀಲ,ಶೀಲವಂತ ಉಮರಾಣಿ, ಬಿಜೆಪಿ ಇಂಡಿ ಮಂಡಲ ಅಧ್ಯಕ್ಷರಾದ ಮಲ್ಲಿಕಾರ್ಜುನ ಕಿವಡೆ,ಅನೀಲ ಜಮಾದಾರ,ಸೇರಿದಂತೆ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು, ನಂತರ ಮಾತನಾಡಿದ ಶ್ರೀ ಕಾಸುಗೌಡ ಬಿರಾದಾರ ಅವರು ಈ ಬಾರಿ ಇಂಡಿ ಮತಕ್ಷೇತ್ರದಿಂದ ನಾನು ಗೆಲುವು ಸಾಧಿಸುವುದು ನೂರಕ್ಕೆ ನೂರರಷ್ಟು ಸತ್ಯ ಈ ಬಾರಿ ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.

ತಾಲೂಕ ವರದಿಗಾರರು:ಶಿವಪ್ಪ.ಬೀ.ಹರಿಜನ.ಇಂಡಿ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button