ರಾಜ್ಯ ಸಾರಿಗೆ ಪ್ರಯಾಣ ದರ ಶೇ 15% ಹೆಚ್ಚಳಕ್ಕೆ ಸಂಪುಟದ ಒಪ್ಪಿಗೆ – ಖಂಡನೀಯ ನಿರುಪಾದಿ.ಕೆ ಗೋಮರ್ಸಿ.

ಸಿಂಧನೂರು ಜ.03

ಶಕ್ತಿ ಯೋಜನೆಯ ಮೂಲಕ ರಾಜ್ಯದ ಮಹಿಳೆಯರಿಗೆ ಉಚಿತ ಪ್ರಯಾಣದ ಅನುಕೂಲ ಮಾಡಿದ್ದ ಕಾಂಗ್ರೆಸ್ ಸರ್ಕಾರ ಶಕ್ತಿ ಯೋಜನೆಯಿಂದ ಯಾವುದೇ ನಷ್ಟವಿಲ್ಲ, ಯೋಜನೆ ಜಾರಿಗೆ ಬಂದ ನಂತರ ಸಾರಿಗೆ ನಿಗಮಗಳ ವಹಿವಾಟು ಹೆಚ್ಚಾಗಿದೆ ಎಂಬುದನ್ನು ಹೇಳುತ್ತಲೇ ನಿಗಮದ ನೌಕರರಿಗೆ ನೀಡಬೇಕಾದ ಸಾವಿರಾರು ಲಕ್ಷ ರೂಪಾಯಿಗಳ ಸಂಬಳವನ್ನು ಬಾಕಿ ಉಳಿಸಿ ಕೊಂಡಿತ್ತು. ಈಗ ಈ ಬಾಕಿ ತೀರಿಸಲು ಮರಳಿ ಜನರ ಜೇಬಿಗೆ ಕೈ ಹಾಕಲು ಸರ್ಕಾರ ಮುಂದಾಗಿದೆ. ಎಂದು ಕೆ.ಆರ್.ಎಸ್ ಪಕ್ಷದ ಯುವ ಮುಖಂಡ ನಿರುಪಾದಿ.ಕೆ ಗೋಮರ್ಸಿ ಪತ್ರಿಕಾ ಹೇಳಿಕೆ ಮುಖಾಂತರ ರಾಜ್ಯ ಸರ್ಕಾರದ ಯಡವಟ್ಟಿನ ಒಪ್ಪಿಗೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಂದುವರೆದು ಈಗ ನಾವು ಯೋಚಿಸ ಬೇಕಿರುವುದು ಸರ್ಕಾರ ಜನರಿಗೆ ಉಚಿತವಾಗಿ ಕೊಟ್ಟಿದ್ದು ಏನು? ಜನರು ಜಾತಿ, ಮತ್ತು ಹಣದ ಚುನಾವಣೆಗೆ ಒಗ್ಗಿ ಕೊಂಡಿರುವ ಮತ್ತು ಸರ್ಕಾರದ ನಿರ್ಧಾರಗಳಿಂದ ಆಗುವ ಕಷ್ಟ ನಷ್ಟಗಳಿಗೂ ತಮಗೂ ಯಾವುದೇ ಸಂಬಂಧವಿಲ್ಲ ಎನ್ನುವ ರೀತಿಯಲ್ಲಿ ಪ್ರತಿರೋಧ ವಿಲ್ಲದೇ ತಮ್ಮ ಪಾಡಿಗೆ ತಾವು ಸುಮ್ಮನಿರುವ ಈ ಕಾಲ ನಾವೇ ಆಯ್ಕೆ ಮಾಡಿಕೊಂಡಿರುವ ಖದೀಮ ರಾಜಕಾರಣಿಗಳಿಗೆ ಸುಗ್ಗಿ ಕಾಲದಂತಾಗಿದೆ.ಭ್ರಷ್ಟರು ಮತ್ತು ಸ್ವಾರ್ಥಿಗಳು ನಮ್ಮನಾಳುತ್ತಿರುವಾಗ ಒಳ್ಳೆಯದನ್ನು ನಿರೀಕ್ಷಿಸುವುದೇ ಒಂದು ರೀತಿಯ ಮೂರ್ಖ ತನವಾಗಿದೆ.ಸರ್ಕಾರದ ಇಂತಹ ಜನ ವಿರೋಧಿ ಅದರಲ್ಲೂ ಸಾಮಾನ್ಯ ಜನರಿಗೆ ಹೆಚ್ಚು ಹೊರೆ ಯಾಗುವ ನಿರ್ಧಾರವನ್ನು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಖಂಡಿಸುತ್ತದೆ. ಮತ್ತು ಸರ್ಕಾರವು ಆಡಳಿತದ ಎಲ್ಲಾ ಹಂತಗಳಲ್ಲಿ ಪಾರದರ್ಶಕತೆಯನ್ನು ಕಾಪಾಡಿ ಕೊಂಡು ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ ಜನಪರ ಆಡಳಿತ ನೀಡಬೇಕು ಹಾಗು ಈ ಕೂಡಲೇ ಪ್ರಯಾಣ ದರ ಹೆಚ್ಚಿಸುವ ನಿರ್ಧಾರವನ್ನು ಹಿಂತೆಗೆದು ಕೊಳ್ಳಬೇಕೆಂದು ಆಗ್ರಹಿಸಿದರು.

ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಪ್ರತಾಪ್.ವಾಯ್.ಕಿಳ್ಳಿ.ಇಲಕಲ್ಲ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button