ನಾಳೆ ಬಸವೇಶ್ವರ ಪತ್ತಿನ ಸಹಕಾರಿ ಸಂಘದ 22 ನೇ. ವಾರ್ಷಿಕ ಸರ್ವ ಸಾಧಾರಣ ಸಭೆ.

ಹುನಗುಂದ ಸ.23

ಶ್ರೀ ಬಸವೇಶ್ವರ ಪತ್ತಿನ ಸಹಕಾರಿ ಸಂಘ ನಿಯಮಿತದ 22 ನೆಯ ವಾರ್ಷಿಕ ಸರ್ವ ಸಾಧಾರಣ ಸಭೆ ಹಾಗೂ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಸೆ. 24 ರಂದು ಮಂಗಳವಾರ 10 ಗಂಟೆಗೆ ಪಟ್ಟಣದ ಶ್ರೀ ಸಂಗಮೇಶ್ವರ ಕಲ್ಯಾಣ ಮಂಟಪದಲ್ಲಿ ಜರುಗಲಿದೆ ಎಂದು ಶ್ರೀ ಬಸವೇಶ್ವರ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಬಸವರಾಜ ಹೊಸೂರ ಹೇಳಿದರು. ಪಟ್ಟಣದ ಶ್ರೀ ಬಸವೇಶ್ವರ ಪತ್ತಿನ ಸಹಕಾರಿ ಸಂಘದ ಕೇಂದ್ರ ಕಚೇರಿಯಲ್ಲಿ ಕರೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಹುನಗುಂದ ಪಟ್ಟಣದ ಕೇಂದ್ರ ಕಚೇರಿ ಸೇರಿದಂತೆ 11 ಶಾಖೆಗಳ ಸದಸ್ಯರು,ಶೇರುದಾರರು, ಠೇವಣಿದಾರರು ಮಹಾ ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಭೆಯನ್ನು ಯಶಸ್ವಿ ಗೊಳಿಸಬೇಕು. ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ನಮ್ಮ ಸಂಘದ ಸದಸ್ಯರ ಪ್ರತಿಭಾನ್ವಿತ ಮಕ್ಕಳನ್ನು ಸತ್ಕರಿಸಿ ಗೌರವಿಸಲಾಗುವುದು ಎಂದರು. ಸಂಘದ ಮುಖ್ಯ ಕಾರ್ಯನಿರ್ವಾಹಕ ಎಸ್.ಸಿ.ಚಳಗೇರಿ ಮಾತನಾಡಿ ಪ್ರಸಕ್ತ ವರ್ಷದಲ್ಲಿ 111.38 ಕೋಟಿ ದುಡಿಯುವ ಬಂಡವಾಳ ಹೊಂದಿದ್ದು.86.51 ಕೋಟಿ ಠೇವಣಿಯನ್ನು ಹೊಂದಿದ್ದು.2023-24 ನೇ ಸಾಲಿನಲ್ಲಿ 98.71 ಲಕ್ಷ ನಿವ್ವಳ ಲಾಭವನ್ನು ಗಳಿಸಿದೆ ಎಂದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಸಿದ್ದರಾಮೇಶ ಮೂಲಿಮನಿ, ನಿರ್ದೇಶಕರಾದ ಸಂಗಣ್ಣ ಹುನ್ನಳ್ಳಿ, ಸೋಮಶೇಖರ ತೋಟಗೇರ,ಸಂಗಪ್ಪ ಹೂಲಗೇರಿ, ಹಿರೇಣ್ಯಪ್ಪ ಆಲೂರ, ನಿಂಗಪ್ಪ ಲೋಕಪುರ, ಇಲಕಲ್ಲ ಶಾಖೆ ವ್ಯವಸ್ಥಾಪಕ ಎಸ್.ಎಸ್.ಹಳಪೇಟೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಮಲ್ಲಿಕಾರ್ಜುನ.ಎಂ.ಬಂಡರಗಲ್ಲ.ಹುನಗುಂದ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button