ಆಕಸ್ಮಿಕವಾಗಿ ಕಾಲುಜಾರಿ ಬಿದ್ದಿರುವ ಆಕಳನ್ನು ರಕ್ಷಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಯವರು.
ಅಥಣಿ ಆ.09

ಅಥಣಿ ಪಟ್ಟಣದ ಹೊರ ವಲಯದಲ್ಲಿರುವ ಬಸವನಗುಡಿ ಹತ್ತಿರ ಅಥಣಿ ಗ್ರಾಮೀಣದಲ್ಲಿ ರಾಜು ಶಿವಯೋಗಿ ಬಿರಡಿ ರವರ ಆಕಳು ಅಂದಾಜು 30×30 ಅಡಿ ವಿಸ್ತಾರವಾದ 45 ರಿಂದ 50 ಅಡಿ ಆಳದ ಅದರಲ್ಲಿ 10 ಅಡಿ ಆಳದ ತೆರೆದ ನೀರಿರುವ ಭಾವಿ ಆಕಸ್ಮಿಕವಾಗಿ ಕಾಲು ಜಾರಿ ಆಕಳು ಬಿದ್ದಿದ್ದು, ಸದರಿ ಸ್ಥಳೀಯ ನಿವಾಸಿಗಳು ಘಟನೆಯ ವಿಷಯವನ್ನು ಅಥಣಿ ಅಗ್ನಿಶಾಮಕ ಠಾಣೆ ದೂರವಾಣಿ ಕರೆ ಮಾಡಿ ತಿಳಿಸಿದರು,

ಕರೆ ಬಂದ ತಕ್ಷಣ ಜಲ ವಾಹನ ದೊಂದಿಗೆ ಅಗ್ನಿಶಾಮಕ ತಂಡ ಸ್ಥಳಕ್ಕೆ ದೌಡಾಯಿಸಿ ಕಾರ್ಯ ಪ್ರವೃತ್ತರಾಗಿ ಸುಮಾರು 45 ರಿಂದ 50 ಅಡಿ ಆಳದ ಅದರಲ್ಲಿ 10 ಅಡಿ ಭಾವಿಯಲ್ಲಿ ಹೊಸ ಹಗ್ಗಗಳ ಸಹಾಯದಿಂದ ಕೆಳಗಿಳಿದು ಸುಮಾರು 01:05 ಒಂದು ಘಂಟೆ ಐದು ನಿಮಿಷಗಳ ಕಾಲ ಶ್ರಮವಹಿಸಿ ಸಿಬ್ಬಂದಿಯವರು ಪ್ರಾಣ ರಕ್ಷಣೆಗಾಗಿ ಕೂಗುತ್ತಿದ್ದ ಆಕಳನ್ನು ಜೀವಂತವಾಗಿ ಅಗ್ನಿಶಾಮಕ ಇಲಾಖೆಯ ತಂಡ ರಕ್ಷಣೆ ಮಾಡಿರುತ್ತಾರೆ. ಈ ಸಮಯ ಪ್ರಜ್ಞೆ ಕಾರ್ಯವನ್ನು ವೀಕ್ಷಿಸಿದ ಅಥಣಿ ಪಟ್ಟಣದ ಹೊರ ವಲಯದಲ್ಲಿರುವ ಬಸವನಗುಡಿ ಹತ್ತಿರ ಅಥಣಿ ಗ್ರಾಮೀಣದ ಸ್ಥಳೀಯ ನಿವಾಸಿಗಳು ಅಗ್ನಿಶಾಮಕ ತಂಡದ ಕಾರ್ಯ ದಕ್ಷತೆಯನ್ನು ಮೆಚ್ಚಿ ಶ್ಲಾಘಿಸಿ ಹಾಗೂ ಹಸ್ತಲಾಘವ ಮಾಡಿ ಆಕಳ ಪ್ರಾಣ ರಕ್ಷಣೆ ಮಾಡಿದ್ದಕ್ಕಾಗಿ ಅಭಿನಂದನೆ ಸಲ್ಲಿಸಿದರು.ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ ಎ.ಡಿ ಮುಲ್ಲಾ ರವರ ನೇತ್ರತ್ವದ ತಂಡದೊಂದಿಗೆ ಭಾಗವಹಿಸಿದ್ದರು.