ಕೊಟ್ಟೂರು ಪೋಲಿಸ್ ರ ಕಾರ್ಯಾಚರಣೆ ಬಂಧಿತ ವ್ಯಕ್ತಿಯಿಂದ ವಶ ಪಡಿಸಿಕೊಂಡು 7. ಬೈಕ್.
ಕೊಟ್ಟೂರು ಆ.10

ಪಟ್ಟಣ ಹಾಗೂ ಸುತ್ತ ಮುತ್ತಲಿನ ಗ್ರಾಮಗಳಲ್ಲಿ ಬೈಕ್ ಕಳ್ಳತನ ದೂರುಗಳು ದಾಖಲಾಗುತ್ತಿರುವುದನ್ನು ಗಮನಿಸಿದ ಡಿವೈಎಸ್ಪಿ ಮಲ್ಲೇಶಪ್ಪ ಮಲ್ಲಾಪುರ ಇವರ ಮಾರ್ಗ ದರ್ಶನದಲ್ಲಿ ವೆಂಕಸ್ವಾಮಿ. ಟಿ.ಸಿ.ಪಿ.ಐ ಕೊಟ್ಟೂರು ವೃತ್ತ ಹಾಗೂ ಪಿಎಸ್ಐ ಗೀತಾಂಜಲಿ ಶಿಂಧೆ ಮತ್ತು ಪೊಲೀಸ್ ಸಿಬ್ಬಂದಿ ಬಸವರಾಜ ಹೆಚ್. ವೀರೇಶ್, ಶಶಿಧರ, ನಾಗಪ್ಪ ಯು.ಹೆಚ್.ಸಿ. ಕೊಟ್ರುಗೌಡ ,ರೇವಣಸಿದ್ದಪ್ಪ ಪೊಲೀಸ್ ರ ತಂಡ ಬೈಕ್ ಕಳ್ಳರ ಪತ್ತೆಗಾಗಿ ರಚಿಸಲಾಗಿತ್ತು. ಮಲ್ಲೇಶಪ್ಪ ಮಲ್ಲಾಪುರ ಡಿವೈಎಸ್ಪಿ ಕೂಡ್ಲಿಗಿ ಇವರ ಸಲಹೆಯಂತೆ ಕೊಟ್ಟೂರು ಪೊಲೀಸ್ ತಂಡ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿ ಇಂದು ಬೆಳಿಗ್ಗೆ 9.30 ರ ಸುಮಾರಿಗೆ ಹ್ಯಾಳ್ಯಾ ರಸ್ತೆಯ ಪೆಟ್ರೋಲ್ ಬಂಕ್ ನಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿ ದೂಪದಹಳ್ಳಿ ಗ್ರಾಮದ ಕೆ ಸಂತೋಷ ತಂದೆ ಹಾಲಪ್ಪ ಎಂಬ 31 ವರ್ಷದ ವ್ಯಕ್ತಿಯನ್ನು ಬಂಧಿಸಿ ಅವನ ಬಳಿ ಇದ್ದ ವಿವಿಧ ಜಿಲ್ಲೆಗಳ ಪೊಲೀಸ್ ಠಾಣೆ ವ್ಯಾಪ್ತಿಗೆ ಸೇರಿದ 7 ಬೈಕ್ ಗಳನ್ನು ವಶ ಪಡಿಸಿ ಕೊಳ್ಳಲಾಗಿದೆ.

ಬೈಕ್ ಗಳ ಅಂದಾಜು ಮೊತ್ತ 2 ಲಕ್ಷದ 50 ಸಾವಿರ ಇದೆ. ಎಂದು ವೆಂಕಟಸ್ವಾಮಿ ಟಿ. ಸಿಪಿಐ ಹಾಗೂ ಗೀತಾಂಜಲಿ ಶಿಂಧೆ ಪಿಎಸ್ಐ ಮತ್ತು ಕಾರ್ಯಾಚರಣೆ ನಿರತ ತಂಡ ಪತ್ರಿಕೆ ಪ್ರಕಟಣೆ ನೀಡಿದರು.ತಂಡದ ಕಾರ್ಯಚರಣೆ ಯಶಸ್ವಿಯನ್ನು ಗಮನಿಸಿದ ವಿಜಯನಗರ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಹರಿಬಾಬು ಕೊಟ್ಟೂರು ಪೊಲೀಸ್ ಕಾರ್ಯಕ್ಕೆ ಪ್ರಶಂಸೆ ವ್ಯಕ್ತಪಡಿಸಿದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಪ್ರದೀಪ್.ಕುಮಾರ್.ಸಿ.ಕೊಟ್ಟೂರು.