ಶ್ರೀಮತಿ ಬಿ.ಬಿ ದೇವದುರ್ಗ ಅವರಿಗೆ – ಜಿಲ್ಲಾ ಮಟ್ಟದ ಉತ್ತಮ ಪ್ರಶಸ್ತಿ ಲಭಿಸಿದೆ.

ಹಿರೇಮಳಗಾವಿ ಸ.05

ಜಿಲ್ಲಾ ಆಡಳಿತ ಜಿಲ್ಲಾ ಪಂಚಾಯತ್ ಉಪ ನಿರ್ದೇಶಕರ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಶಾಲಾ ಶಿಕ್ಷಣ ಇಲಾಖೆ, ಬಾಗಲಕೋಟ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ ಹುನಗುಂದ ತಾಲೂಕಿನ ಹಿರೇಮಳಗಾವಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಗುರುಗಳಾಗಿರುವ ಶ್ರೀಮತಿ ಬಿ.ಬಿ ದೇವದುರ್ಗ ಗುರು ಮಾತೆಯರಿಗೆ 2025 ನೇ. ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ನೀಡಲಾಯಿತು.ಬಾಗಲಕೋಟೆಯ ಕಲಾ ಭವನದಲ್ಲಿ ಸೆಪ್ಟಂಬರ್ 5 ರಂದು ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಶ್ರೀ ಆರ್.ಬಿ ತಿಮ್ಮಾಪುರ್, ಬಾಗಲಕೋಟೆ ಸಂಸದರು ಆಗಿರುವ ಶ್ರೀ ಪಿ.ಸಿ ಗದ್ದಿಗೌಡರ್, ಬಾಗಲಕೋಟೆಯ ಶಾಸಕರು ಆಗಿರುವ ಮಾನ್ಯ ಶ್ರೀ ಎಚ್.ವೈ ಮೇಟಿ ಹಾಗೂ ಬಾಗಲಕೋಟೆಯ ಜಿಲ್ಲಾಧಿಕಾರಿಗಳು ಆಗಿರುವ ಶ್ರೀ ಸಂಗಪ್ಪ ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳು ಆಗಿರುವ ಶ್ರೀ ಶಶಿಧರ್ ಕೂರೆರ ಹಾಗೂ ಜಿಲ್ಲಾ ಉಪ ನಿರ್ದೇಶಕರು ಆಗಿರುವ ಶ್ರೀ ಎ.ಸಿ ಮಣ್ಣಿಕೇರಿ ಮತ್ತು ಹುನಗುಂದ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಆಗಿರುವ ಮಾನ್ಯ ಶ್ರೀಮತಿ ಜಾಸ್ಮಿನ್ ಕಿಲ್ಲೆದಾರ ಹಾಗೂ ಇನ್ನಿತರ ಗಣ್ಯ ಮಾನ್ಯರು ಈ ಅಭೂತ ಪೂರ್ವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪಡೆದ ಶ್ರೀಮತಿ ಬಿ.ಬಿ ದೇವದುರ್ಗ ಮೇಡಂ ಇವರಿಗೆ ಸಮಸ್ತ ಹುನಗುಂದ ತಾಲೂಕಿನ ಶಿಕ್ಷಕ ಬಳಗ ಹಾಗೂ ಹಿರೇಮಳಗಾವಿ ಗ್ರಾಮದ ಗುರು ಹಿರಿಯರು ಮತ್ತು ಶಾಲೆಯ ಶಿಕ್ಷಕ ಬಳಗ ಹಾಗೂ ಪ್ರೀತಿಯ ವಿದ್ಯಾರ್ಥಿಗಳು ಶುಭ ಹಾರೈಸಿದ್ದಾರೆ ಎಂದು ವರದಿಯಾಗಿದೆ.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button