ಕಾಂಗ್ರೆಸ್ ಸರ್ಕಾರದ ಪಂಚ ಯೋಜನೆಯ ಮೊದಲನೇ ಶಕ್ತಿ ಯೋಜನೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಮೂಲಕ ಚಾಲನೆ ನೀಡಿದ ಶಾಸಕರು.
ಹೊಸಪೇಟೆ ಜೂನ್.12

ಹೊಸಪೇಟೆ ಶಾನ್ ಬಾಗ್ ವೃತ್ತದಿಂದ ಆರಂಭಗೊಂಡ ಮೆರವಣಿಗೆ (ಜೆ.ಎಸ್.ಡಬ್ಲ್ಯೂ) ಬಸ್ ನಿಲ್ದಾಣದವರೆಗೂ ಮೆರವಣಿಗೆ ಮುಖಾಂತರ ಆಗಮಿಸಿಶಕ್ತಿ ಯೋಜನ ಅಡಿಯಲ್ಲಿ ರಾಜ್ಯದ ಎಲ್ಲಾ ಮಹಿಳೆಯರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಸೌಲಭ್ಯವನ್ನು ಎಚ್. ಆರ್. ಗವಿಯಪ್ಪ ಶಾಸಕರು ಚಾಲನೆಯನ್ನು ನೀಡಿದರು. ಹೊಸಪೇಟೆಯಿಂದ ಪ್ರಯಾಣಿಸುವ ಮಹಿಳೆಯರು ಕರ್ನಾಟಕ ರಾಜ್ಯದ ನಿವಾಸಿಗಳೆಂಬ ಪುರಾವೆಗಾಗಿ ತಮ್ಮ ಮೂಲ ದಾಖಲಾತಿಗಳನ್ನು ತೋರಿಸಿ (ಶೂನ್ಯ ಮೊತ್ತದ) ಉಚಿತವಾಗಿ ಟಿಕೆಟ್ ಪಡೆದು ಪ್ರಯಾಣ ಮಾಡಬಹುದಾಗಿದೆ ಎಂದು ರಾಣಿ ಸಂಯುಕ್ತ ಹೇಳಿದರು.

ಕಾಂಗ್ರೆಸ್ ಸರ್ಕಾರವು ಶಕ್ತಿ ಯೋಜನ ನಮ್ಮ ಮಹಿಳೆಯರ ಶಕ್ತಿಯನ್ನು ಹೆಚ್ಚಿಸುತ್ತದೆ,ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚು ಕೆಲಸಗಳನ್ನು ಮಾಡುತ್ತೇವೆ ಎಂದು ಹೇಳಿದರು ಎಚ್. ಆರ್. ಗವಿಯಪ್ಪ ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠ ಅಧಿಕಾರಿಗಳು, ನಗರ ಸಭೆ ಸದಸ್ಯರು ,ಕೆ ಎಸ್ ಆರ್ ಟಿ ಸಿ ಅಧಿಕಾರಿಗಳು ಇನ್ನು ಹಲವಾರು ಸಂಘಟನೆ ಮುಖಂಡರು ಪಾಲ್ಗೊಂಡಿದ್ದರು. ತಾಲೂಕು ವರದಿಗಾರರು:ಮಾಲತೇಶ್.ಶೆಟ್ಟರ್. ಹೊಸಪೇಟೆ