ಮಕ್ಕಳು ದೇಶದ ಉತ್ತಮ ನಾಗರಿಕರಾಗಲಿ – ಸಂತೋಷ ಬಂಡೆ.

ಹಿರೇರೂಗಿ ಜೂನ್.12

ಇಂಡಿ ತಾಲ್ಲೂಕಿನ ಮಕ್ಕಳು ದೇಶದ ಸಂಪತ್ತು.ಈ ಸಂಪತ್ತನ್ನು ಸಂರಕ್ಷಿಸಿ, ಪೋಷಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಮಕ್ಕಳ ಬಾಲ್ಯ,ಕನಸು,ಶಿಕ್ಷಣವನ್ನು ಕಸಿಯುತ್ತಿರುವ ಬಾಲ ಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡುವಲ್ಲಿ ಎಲ್ಲರ ಶ್ರಮ ಅಗತ್ಯ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು. ಅವರು ತಾಲೂಕಿನ ಹಿರೇರೂಗಿ ಗ್ರಾಮದ ಕೆಬಿಎಸ್, ಕೆಜಿಎಸ್ ,ಯುಬಿಎಸ್ ಶಾಲೆಯ ವತಿಯಿಂದ ಹಮ್ಮಿಕೊಂಡ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಕ್ಕೆ ಚಾಲನೆ ನೀಡಿ ಮಾತನಾಡಿದರು. ಕಾರ್ಮಿಕ ಪದ್ಧತಿಯು ಮಕ್ಕಳನ್ನು ದೈಹಿಕ, ನೈತಿಕ, ಮಾನಸಿಕ ಹಾಗೂ ಆರ್ಥಿಕವಾಗಿ ಶೋಷಣೆಗೆ ಒಳಪಡಿಸಿ, ಅವರ ಶೈಕ್ಷಣಿಕ ಅವಕಾಶಗಳನ್ನು ಮತ್ತು ಬದುಕು ಕಟ್ಟಿಕೊಳ್ಳುವ ಕನಸಿಗೆ ತಡೆಯೊಡ್ಡುತ್ತಿರುವುದು ಕಳವಳಕಾರಿಯಾಗಿದೆ ಎಂದು ಹೇಳಿದರು. ಕೆಜಿಎಸ್ ಶಾಲಾ ಮುಖ್ಯ ಶಿಕ್ಷಕ ಸುರೇಶ ಅಂಕಲಗಿ ಅಧ್ಯಕ್ಷತೆ ವಹಿಸಿ ಮಾತನಾಡಿ,ಬಾಲಕಾರ್ಮಿಕರಾಗಿ ದುಡಿಯುತ್ತಿರುವ ಮಕ್ಕಳು ಈ ದುಷ್ಟ ವ್ಯವಸ್ಥೆಯಿಂದ ಹೊರಬಂದು ತಮ್ಮ ಹಕ್ಕುಗಳ ಕುರಿತು ಜಾಗೃತಿ ಹೊಂದಿ ದೇಶದ ಉತ್ತಮ ನಾಗರೀಕರಾಗಲಿ ಎಂದು ಹೇಳಿದರು. ಶಿಕ್ಷಕ ಎಸ್ ಎಸ್ ಅರಬ ಮಾತನಾಡಿ, ಬಡತನ ನಿರ್ಮೂಲನೆ, ಕೌಶಲ್ಯಾಧಾರಿತ ಉದ್ಯೋಗ, ಸಾರ್ವತ್ರಿಕ ಶಿಕ್ಷಣ, ಸಾರ್ವಜನಿಕರಲ್ಲಿ ಅರಿವು, ಪೋಷಕರ ಮನಪರಿವರ್ತನೆ ಮೂಲಕ ಬಾಲ ಕಾರ್ಮಿಕ ಪದ್ಧತಿಯನ್ನು ಹೋಗಲಾಡಿಸಲು ಸಾಧ್ಯ ಎಂದು ಹೇಳಿದರು. ಶಿಕ್ಷಕರಾದ ಎಸ್ ಎಚ್ ಮೈದರಗಿ, ಎಸ್ ಆರ್ ಚಾಳೇಕಾರ,ಎಸ್ ಎಂ ಪಂಚಮುಖಿ, ಎಸ್ ಡಿ ಬಿರಾದಾರ, ವಿ ವೈ ಪತ್ತಾರ,ಜೆ ಎಂ ಪತಂಗಿ,ಸಾವಿತ್ರಿ ಸಂಗಮದ,ಎಸ್ ಬಿ ಕುಲಕರ್ಣಿ,ಜೆ ಸಿ ಗುಣಕಿ,ಎಸ್ ಎನ್ ಡಂಗಿ,ಎಂ ಎಂ ಪತ್ತಾರ,ಸುರೇಶ ದೊಡ್ಯಾಳಕರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button