ಮನೆಗಳಿಗೆ ಹಕ್ಕು ಪತ್ರ ಕೊಡಿಸುತ್ತೇನೆ — ಶಾಸಕ ಜಿಹೆಚ್ ಶ್ರೀನಿವಾಸ್.

ತರೀಕೆರೆ ಜೂನ್.18

ಕಾಂಗ್ರೆಸ್ ಪಕ್ಷ ಕೊಟ್ಟಿರುವ ಗ್ಯಾರಂಟಿಗಳನ್ನು ಖಂಡಿತ ಈಡೇರಿಸುತ್ತೇವೆ ಎಂದು ನೂತನ ಶಾಸಕರಾದ ಜಿ ಎಚ್ ಶ್ರೀನಿವಾಸ್ ರವರು ಇಂದು ಬೇಲೇನಹಳ್ಳಿ ಗ್ರಾಮದಲ್ಲಿ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು. ಇಂದಿನಿಂದ ಉಚಿತ ವಿದ್ಯುತ್ತಿಗೆ ಅರ್ಜಿ ಸಲ್ಲಿಸಬಹುದು, ಆಗಸ್ಟ್ ನಿಂದ ಸರ್ಕಾರ ಗೃಹಲಕ್ಷ್ಮೀ ಯೋಜನೆ ಜಾರಿ ಮಾಡುತ್ತದೆ ಮತ್ತು ಅನ್ನ ಭಾಗ್ಯ ಯೋಜನೆಯನ್ನು ಜಾರಿ ಮಾಡುತ್ತೇವೆ ಎಂದು ಹೇಳಿದರು. ಅಂಬೇಡ್ಕರ್ ಕಾಲೋನಿಯಲ್ಲಿರುವ ಎಲ್ಲಾ ಮನೆಗಳಿಗೂ ಹಕ್ಕು ಪತ್ರ ಇರುವುದಿಲ್ಲ, ಖಾಸಗಿಯವರ ಸ್ಥಳದಲ್ಲಿ ಸುಮಾರು 80 ವರ್ಷಗಳಿಂದಲೂ ಸಹ ಮನೆಗಳನ್ನು ಕಟ್ಟಿಕೊಂಡು ವಾಸವಾಗಿದ್ದೇವೆ ಎಂದು ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕರಾದ ತರೀಕೆರೆ ಎನ್ ವೆಂಕಟೇಶ್ ರವರು ಮನವಿ ಮಾಡಿದರು. ಮನವಿಗೆ ಸ್ಪಂದಿಸಿ ಮಾತನಾಡಿದ ಶ್ರೀನಿವಾಸ್ ರವರು ಎಲ್ಲಾ ಮನೆಗಳಿಗೂ ಸಹ ಹಕ್ಕು ಪತ್ರಗಳನ್ನು ಕೊಡಿಸುತ್ತೇನೆ ಎಂದು ಹೇಳಿದರು. ಮನೆ ನಿವೇಶನ ಇಲ್ಲದವರಿಗೆ ಗ್ರಾಮ ಠಾಣದಲ್ಲಿ ಮನೆ ನಿವೇಶನ ಕೊಡಿಸುತ್ತೇನೆ ಎಂದು ಹೇಳಿದರು.

ಯಾರು ಸಹ ಮಧ್ಯವರ್ತಿಗಳಿಗೆ ಹಣ ಕೊಡದೆ ನೇರವಾಗಿ ನಮ್ಮ ಕಚೇರಿಗೆ ಭೇಟಿ ನೀಡಿ ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು ಎಂದು ಹೇಳಿದರು. ಸಮಾರಂಭದಲ್ಲಿ ಡಿಎಸ್ಎಸ್ ಜಿಲ್ಲಾ ಸಂಘಟನಾ ಸಂಚಾಲಕರಾದ ನವೀನ್, ತಾಲೂಕು ಸಂಘಟನಾ ಸಂಚಾಲಕರಾದ ಎನ್ ಸಿದ್ದಪ್ಪ, ಮಾಜಿ ಸಂಚಾಲಕರಾದ ಎಸ್ ಆನಂದ, ಎಪಿಎಂಸಿ ಮಾಜಿ ಅಧ್ಯಕ್ಷರಾದ ಅನುಬು, ಮಾಜಿ ತಾಲೂಕು ಪಂಚಾಯಿತಿ ಸದಸ್ಯರಾದ ಕೆಂಪರಾಜ್, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಜಿಲ್ಲಾ ವರದಿಗಾರರು:ಎನ್.ವೆಂಕಟೇಶ್.ತರೀಕೆರೆ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button