ಒಳ ಮೀಸಲಾತಿ ವಿಂಗಡಣೆ ವಿರುದ್ದ, ಭೋವಿ ವಡ್ಡರ ಯುವ ವೇದಿಕೆ ವತಿಯಿಂದ – ಬೃಹತ್ ಪ್ರತಿಭಟನೆ.

ಬೆಳಗಾವಿ ಡಿ.18

ಸರ್ಕಾರ ಒಳ ಮೀಸಲಾತಿ ವಿಂಗಡಣೆಗೆ ಮುಂದಾಗಿರುವುದನ್ನು ವಿರೋಧಿಸಿ ಇಂದು ಬೆಳಗಾವಿ ಸುವರ್ಣ ಸೌಧ ಎದುರಿಗಿನ ಕೊಂಡಸ್ಕೊಪ್ಪದಲ್ಲಿ ಭೋವಿ ವಡ್ಡರ, ಬಂಜಾರ, ಲಮಾಣಿ, ಕೊರಮ, ಕೊರಚ ಜಾತಿಗಳ ಮಹಾ ಒಕ್ಕೂಟ ಬೃಹತ್ ಹೋರಾಟ ಕೈಗೊಂಡಿದ್ದರು, ಇದೆ ಸಂದರ್ಭದಲ್ಲಿ ಭೋವಿ ವಡ್ಡರ ಯುವ ವೇದಿಕೆ ಜಿಲ್ಲಾಧ್ಯಕ್ಷ ಸಿದ್ದಾರ್ಥ್ ಪಾತ್ರೋಟ್ ಮಾತನಾಡಿ ನಮ್ಮ ಜನಾಂಗದ ಬಾಂಧವರು ಆರ್ಥಿಕ, ಶೈಕ್ಷಣಿಕ, ಸಾಮಾಜಿಕವಾಗಿ ಹಿಂದುಳಿದವರು. ರಾಜ್ಯ ಸರ್ಕಾರ ಅವೈಜ್ಞಾನಿಕ, ಅಸಾಂವಿಧಾನಿಕವಾಗಿ ಕಾನೂನು ಬಾಹಿರ ಮತ್ತು ದ್ವೇಷ ಅಶಾಂತಿಗೆ ಕಾರಣವಾಗಿರು ಸಂವಿಧಾನ ಬಾಹಿರ ಒಳ ಮೀಸಲಾತಿ ವರ್ಗೀಕರಣವು ಭವಿಷ್ಯದ ಮಕ್ಕಳ ಪಾಲಿಗೆ ಮರಣ ಶಾಸನವಾಗಿ ಪರಿಣಮಿಸಲಿದೆ. ಹಾಗಾಗಿ ಹೋರಾಟ ಅನಿವಾರ್ಯವಾಗಿದೆ ಎಂದರು.

ಸರ್ಕಾರ ಈ ನಿರ್ಣಯದಿಂದ ಹಿಂದೆ ಸರಿಯಬೇಕು. ಇಲ್ಲವಾದಲ್ಲಿ ಮುಂಬರುವ ದಿನಳಗಲ್ಲಿ ಹೋರಾಟ ತೀವ್ರ ಸ್ವರೂಪ ಪಡೆಯುವುದು ಎಂದು ತಿಳಿಸಿದರು. ಇನ್ನೂ ಪ್ರತಿಭಟನೆಯಲ್ಲಿ ರಾಜ್ಯದ ಹಲವಾರು ಜಿಲ್ಲೆಗಳಿಂದ ಜನರು ಭಾಗವಹಿಸಿದ್ದರು ಹಾಗೂ ಇದೆ ಸಂದರ್ಭದಲ್ಲಿ ಅಖಿಲ್ ಕರ್ನಾಟಕ ಭೋವಿ ವಡ್ಡರ ಯುವ ವೇದಿಕೆ ಬೆಳಗಾವಿ ಜಿಲ್ಲಾಧ್ಯಕ್ಷ ಸಿದ್ದಾರ್ಥ್ ಪಾತ್ರೋಟ ಹಾಗೂ ರಾಜ್ಯ ಸಂಚಾಲಕರಾದ ಸುನೀಲ್ ದೋತ್ರೆ ಮತ್ತು ಬಾಗಲಕೋಟೆ ಜಿಲ್ಲಾಧ್ಯಕ್ಷ ಬಸವರಾಜ್ ಪಾತ್ರೋಟ ಹಾಗೂ ರಾಜ್ಯದ ಭೋವಿ ವಡ್ಡರ ಸಮಾಜದ ಹಿರಿಯರು ಹಾಗೂ ಯುವಕರು, ಮಹಿಳಾ ಮುಖಂಡರು ಉಪಸ್ಥಿತರಿದ್ದರು.

ಜಿಲ್ಲಾ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಎಂ.ಎಂ ಶರ್ಮಾ ಬೆಳಗಾವಿ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button