ಪತ್ರಿಕಾ ದಿನಾಚರಣೆ ಅಂಗವಾಗಿ ಹೊಸಪೇಟೆಯಲ್ಲಿ ಕಾನೂನು ಅರಿವು ಕಾರ್ಯಗಾರ.
ಹೊಸಪೇಟೆ ಜುಲೈ.1

ಪತ್ರಕರ್ತರು ಕಾನೂನಿನ ಅರಿವು ಹೊಂದಲಿ ಪತ್ರಕರ್ತರ ಸಂಘದ ವಿಜಯನಗರ ಜಿಲ್ಲಾ ಘಟಕ ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಸಹಯೋಗದಲ್ಲಿ ಪತ್ರಿಕಾ ದಿನಾಚರಣೆ ಅಂಗವಾಗಿ ಕಾನೂನು ಅರಿವು ಕಾರ್ಯಾಗಾರ ಶನಿವಾರ ಪತ್ರಿಕಾ ಭವನದಲ್ಲಿ ನಡೆಯಿತು.ಕಾರ್ಯಾಗಾರವನ್ನು ಉದ್ಧಾಟಿಸಿ ಮಾತನಾಡಿದ ಅಪರ ಹಿರಿಯ ಸಿವಿಲ್ ನ್ಯಾಯಾಧೀಶ ರಮೇಶ ಬಾಬು ಬಿ.ಎನ್, ಪತ್ರಕರ್ತರಿಗೆ ಕಾನೂನು ಅರಿವು ಹೊಂದಿರಬೇಕಾಗಿದ್ದು ಬಹಳ ಅವಶ್ಯವಿದೆ. ಸಮಾಜದಲ್ಲಿ ಪತ್ರಿಕೆಗಳು ಮತ್ತು ಪತ್ರಕರ್ತರಿಗೆ ವಿಶಿಷ್ಟ ಸ್ಥಾನಮಾನವಿದ್ದು, ಸಮಾಜ ಕಟ್ಟುವಲ್ಲಿ ಪತ್ರಿಕೆಗಳ ಪಾತ್ರ ಪ್ರಮುಖವಾಗಿದೆ. ರಜೆರಹಿತ ಕೆಲಸ ಮಾಡುವ ಪತ್ರಕರ್ತರ ಕಾರ್ಯ ಶ್ಲಾಘನೀಯ ಎಂದು ಹೇಳಿದರು.3ನೇ ಅಪರ ಸಿವಿಲ್ ನ್ಯಾಯಾಧೀಶೆ ಚೈತ್ರ.ಜೆ ಮಾತನಾಡಿ, ಪತ್ರಕರ್ತರು ಸಾಮಾಜಿಕ ಬದ್ಧತೆಯನ್ನು ಅರಿತು ಕಾರ್ಯನಿರ್ವಹಿಸಬೇಕು. ಪತ್ರಕರ್ತರಿಗೆ ಸಮಾಜದಲ್ಲಿ ವಿಶೇಷ ಬದ್ಧತೆ ಇದ್ದು ಅದನ್ನು ಅರಿತು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಉತ್ತಮ ಸಮಾಜ ನಿರ್ಮಾಣಕ್ಕೆ ಶ್ರಮಿಸಬೇಕು ಎಂದು ಸಲಹೆ ನೀಡಿದರು.ತಾಲೂಕು ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಎ.ಕರುಣಾನಿಧಿ ವಿಶೇಷ ಉಪನ್ಯಾಸ ನೀಡಿ, ಪತ್ರಕರ್ತರಾದವರಿಗೆ ಯಾವ ಸುದ್ದಿ ನ್ಯಾಯಾಂಗ ನಿಂದನೆ ಆಗುತ್ತದೆಯೇ ಅಥವಾ ಆಗುವುದಿಲ್ಲ ಎಂಬ ಜ್ಞಾನ ಇರಬೇಕು. ಹಾಗಾಗಿ ಪತ್ರಕರ್ತರು ಕಾನೂನಿಗೆ ಸಂಬಂಧಿಸಿದ ವರದಿ ಮಾಡುವಾಗ ಜಾಗೃತೆ ವಹಿಸಬೇಕು ಎಂದು ಸಲಹೆ ನೀಡಿದರು. ಇದೇ ಸಂದರ್ಭದಲ್ಲಿ ಪತ್ರಕರ್ತರು ಹಾಗೂ ಪತ್ರಿಕೋದ್ಯಮದ ವಿದ್ಯಾರ್ಥಿಗಳೊಂದಿಗೆ ಸಂವಾದ ಕೂಡ ನಡೆಸಿದರು.ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಪಿ.ಸತ್ಯನಾರಾಯಣ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯಾಗಾರದಲ್ಲಿ ಭಾಗವಹಿಸಿದ್ದ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಕೆ,ಲಕ್ಷ್ಮಣ್. ರಾಜ್ಯ ಸಮಿತಿ ಸದಸ್ಯ ಪಿ.ವೆಂಕೋಬ ನಾಯಕ(ವೆಂಕಿ), ಖಜಾಂಜಿ ಅನೂಪಕುಮಾರ, ಕಾನೂನು ಸೇವಾ ಸಮಿತಿ ಆಡಳಿತ ಸಹಾಯಕ ಎಸ್.ಬಿ.ಕಮತಗಿ ಸೇರಿದಂತೆ ಪತ್ರಕರ್ತರು ಭಾಗವಹಿಸಿದ್ದರು.ಆಕಾಶವಾಣಿ ವರದಿಗಾರ್ತಿ ಪೂರ್ಣಿಮಾ ಪ್ರಾರ್ಥಿಸಿದರು. ಪ್ರಾಸ್ತಾವಿಕವಾಗಿ ಹಿರಿಯ ಪತ್ರಕರ್ತ ಅನಂತ ಜೋಶಿ ಮಾತನಾಡಿದರು. ಪತ್ರಕರ್ತ ಅನಂತ ಪದ್ಮನಾಭರಾವ್ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತರು ಪಾಲ್ಗೊಂಡಿದ್ದರು.
ತಾಲೂಕ ವರದಿಗಾರರು:ಮಾಲತೇಶ. ಶೆಟ್ಟರ್. ಹೊಸಪೇಟೆ