ಮೊಳಕಾಲ್ಮುರು ಕ್ಷೇತ್ರದ ರೈತರಿಗೆ ಸರಿಯಾದ ರೀತಿಯಿಂದ ಕೆಲಸಗಳು ಮಾಡಿ ಕೊಡಬೇಕು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ಕೊಟ್ಟ ಶಾಸಕರು.

ಮೊಳಕಾಲ್ಮುರು ನವೆಂಬರ್.2

ಚಿತ್ರದುರ್ಗ ಜಿಲ್ಲೆಯ ಇಂದು ಮೊಳಕಾಲ್ಮೂರು ತಾಲೂಕಿನ ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ಜನಪ್ರಿಯ ಶಾಸಕರಾದ ಶ್ರೀ ಎನ್ ವೈ ಗೋಪಾಲಕೃಷ್ಣರವರ ಅಧ್ಯಕ್ಷತೆ ತಾಲೂಕು ಮಟ್ಟದ ಕೆ ಡಿ ಪಿ ಸಭೆಯಲ್ಲಿ ಪಾಲ್ಗೊಂಡರು ಈ ಸಂದರ್ಭದಲ್ಲಿ ಮೊಳಕಾಲ್ಮೂರು ಕ್ಷೇತ್ರದ ಸಾರ್ವಜನಿಕರಿಗೆ ಆಫೀಸುಗಳಿಗೆ ಅಲೆದಾಡಿಸುವಂತಿಲ್ಲ ರೈತರ ಮೇಲೆ ಪ್ರೀತಿ ಅಭಿಮಾನ ವಿಶ್ವಾಸ ಇರುವಂತ ಶಾಸಕರು ಅಂದರೆ ಎನ್ ವೈ ಗೋಪಾಲಕೃಷ್ಣ ಶಾಸಕರು ಬೆಳೆ ಪರಿಹಾರಗಳು ಕುಡಿಯುವ ನೀರಿನ ವ್ಯವಸ್ಥೆ ದನಕರುಗಳಿಗೆ ಮೇವಿನ ವ್ಯವಸ್ಥೆ ಮತ್ತು ಆರೋಗ್ಯದ ಬಗ್ಗೆ ಆಸ್ಪತ್ರೆಗಳಲ್ಲಿ ಮಲೇರಿಯಾ ಸೊಳ್ಳೆ ಚರಂಡಿಗಳ ಸ್ವಚ್ಛತೆ ಬಗ್ಗೆ ಸೂಚನೆ ಕೊಟ್ಟ ಎನ್ ವೈ ಗೋಪಾಲಕೃಷ್ಣ ಶಾಸಕರು.

ಅಧಿಕಾರಿಗಳಿಗೆ ತೀವ್ರ ಬರಗಾಲದ ಪರಿಸ್ಥಿತಿ ನೋಡಿ ಅಧಿಕಾರಿಗಳು ಒಂದು ಸುಸಜ್ಜಿತ ಆಫೀಸನ್ನು ರೈತರಿಗೆ ಮತ್ತು ನಾಗರಿಕರಿಗೆ ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆ ಆಗದಂತೆ ಸಮರ್ಪಕವಾಗಿ ಕೆಲಸಗಳನ್ನು ಮಾಡಿ ಕೊಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ಕೊಟ್ಟರು ಮಾನ್ಯ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಎನ್ ವೈ ಗೋಪಾಲಕೃಷ್ಣ ಶಾಸಕರು ತಾಲೂಕು ಮಟ್ಟದ ಎಲ್ಲ ಇಲಾಖೆ ಅಧಿಕಾರಿಗಳು ಮೊದಲಾದವರು ಉಪಸ್ಥಿತರಿದ್ದರು ಎಂದು ವರದಿಯಾಗಿದೆ.

ತಾಲೂಕ ವರದಿಗಾರರು:ತಿಪ್ಪೇಸ್ವಾಮಿ.ಹೊಂಬಾಳೆ. ಮೊಳಕಾಲ್ಮುರು

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.
Back to top button