ತಾಲೂಕ ವೈದ್ಯಾಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಶಾಸಕರು.

ಮೊಳಕಾಲ್ಮೂರು ಜುಲೈ.12
ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮುರು ಪಟ್ಟಣದಲ್ಲಿ ವಿಕಲಚೇತನ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಚಿತ್ರದುರ್ಗ ಹಾಗೂ ಸ್ಥಳೀಯ ಶಾಸಕರ ಪ್ರದೇಶ ಅಭಿವೃದ್ಧಿ ಯೋಜನೆ ಅಡಿಯಲ್ಲಿ 28 ಫಲಾನುಭವಿಗಳಿಗೆ ದ್ವಿಚಕ್ರ ವಾಹನಗಳನ್ನು ಮಾನ್ಯ ಅಭಿವೃದ್ಧಿ ಹರಿಕಾರರಾದ ಎನ್ ವೈ ಗೋಪಾಲಕೃಷ್ಣ ಶಾಸಕರು ಚಾಲನೆ ನೀಡಿದರು ಮತ್ತು ವಿಕಲಚೇತನ ಎಸ್ಎಸ್ಎಲ್ಸಿ ಪಾಸಾದವರಿಗೆ 11 ಜನ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಮತ್ತು ಕಲರ್ ಪ್ರಿಂಟ್ ಜೆರಾಕ್ಸ್ ಮಿಷನ್ ಗಳನ್ನು ಮಾನ್ಯ ಅಭಿವೃದ್ಧಿ ಹರಿಕಾರರಾದ ಎನ್ ವೈ ಗೋಪಾಲಕೃಷ್ಣ ಶಾಸಕರು ವಿತರಣೆ ಮಾಡಿದರು ಮತ್ತು ತಾಲೂಕ ಆಸ್ಪತ್ರೆಗೆ ಭೇಟಿ ನೀಡಿ ನಾಗರಿಕರ ಸಮಸ್ಯೆಗಳನ್ನು ತಾಲೂಕು ವೈಧ್ಯಾಧಿಕಾರಿಗಳ ನಿರ್ಲಕ್ಷತೆಯಿಂದ ಸಾರ್ವಜನಿಕರಿಗೆ ಸರಿಯಾದ ರೀತಿಯಿಂದ ಆರೋಗ್ಯ ತಪಾಸಣೆ ಮಾಡುತ್ತಿಲ್ಲ ಎಂಬುದು ಕಂಡು ಬರುತ್ತದೆ.

ಆದ್ದರಿಂದ ತಾಲೂಕು ವೈದ್ಯಾಧಿಕಾರಿಗಳು ಸಾರ್ವಜನಿಕರಿಗೆ ಸರಿಯಾದ ರೀತಿಯಿಂದ ಚಿಕಿತ್ಸೆ ಕೊಡಬೇಕು ಮತ್ತು ಕೊಡಿಸಬೇಕೆಂದು ಮತ್ತು ಮೆಡಿಸನ್ ಗಳು ಬೇರೆ ಕಡೆಗೆ ಮೆಡಿಸನ್ ಇಲ್ಲ ಅಂತ ಬರೆದು ಕಳಿಸಬಾರದು ಆಸ್ಪತ್ರೆಯಲ್ಲಿ ಎಲ್ಲಾ ಮೆಡಿಸಿನ್ಸ್ ಗಳು ಬರುತ್ತವೆ ಆದಕಾರಣ ಬಡವರಿಗೆ ನೋವು ಕೊಡದೆ ಗೌರ್ಮೆಂಟ್ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ರೋಗಿಗಳಿಗೆ ಕೊಡಿಸಬೇಕೆಂದು ಮಾನ್ಯ ಅಭಿವೃದ್ಧಿ ಹರಿಕಾರರಾದ ಎನ್ ವೈ ಗೋಪಾಲಕೃಷ್ಣ ಶಾಸಕರು ತಾಲೂಕು ವೈದ್ಯಾಧಿಕಾರಿಗಳಿಗೆ ಎಚ್ಚರಿಕೆ ನೀಡಿದರು ಎಂದು ವರದಿಯಾಗಿದೆ.
ತಾಲೂಕ ವರದಿಗಾರರು:ತಿಪ್ಪೇಸ್ವಾಮಿ.ಹೊಂಬಾಳೆ. ಮೊಳಕಾಲ್ಮೂರು