ನೆಹರು ಯುವ ಕೇಂದ್ರದ ವತಿಯಿಂದ ಕ್ರೀಡಾಕೂಟ.
ಬೇವೂರ ಫೆಬ್ರುವರಿ.25

ನೆಹರು ಯುವ ಕೇಂದ್ರ ಬಾಗಲಕೋಟೆ ,ಚೌಡಾಪುರದ ಸ್ವಾಮಿ ವಿವೇಕಾನಂದ ಗ್ರಾಮೀಣ ಅಭಿವೃದ್ಧಿ ಯುವಕ ಸಂಸ್ಥೆಯ ವತಿಯಿಂದ ಬೇವೂರಿನ ಪಿ.ಎಸ್.ಎಸ್ ಕಾಲೇಜಿನಲ್ಲಿ ವಲಯ ಮಟ್ಟದ ಕ್ರೀಡಾಕೂಟವನ್ನು ಆಯೋಜಿಸಿ ಮಹಿಳೆ ,ಪುರುಷರ ಕಬ್ಬಡಿ,ರೀಲೆ,ಹಗ್ಗ ಜಗ್ಗಾಟ ಆಟಗಳನ್ನು ನಡೆಸಿ ವಿಜೇತರಾದವರಿಗೆ ಪ್ರಶಸ್ತಿ ಪತ್ರ,ಶಿಲ್ಡ್ ನೀಡಿ ಅಭಿನಂದಿಸಲಾಯಿತು.ಪ್ರಾಚಾಯ೯ರಾದ ಜಗದೀಶ ಗು.ಭೈರಮಟ್ಟಿ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಭಾಗವಹಿಸಿದ ಹಿರಿಯ ಉಪನ್ಯಾಸಕರಾದ ಎಸ್.ಎಸ್ ಆದಾಪೂರ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಕ್ರೀಡಾ ಚಟುವಟಿಕೆಗಳು ಅವಶ್ಯಕವಾಗಿವೆ ಎಂದರು.

ಹಿರಿಯ ಉಪನ್ಯಾಸಕರಾದ ಬಿ.ಬಿ.ಬೇವೂರ, ಎನ್.ಎಸ್.ಎಸ್.ಅಧಿಕಾರಿ ಡಾ.ಸಂಗಮೇಶ ಹಂಚಿನಾಳ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ನೆಹರು ಯುವ ಕೇಂದ್ರದ ಸಂಚಾಲಕ ಶರಣು ಕಡ್ಲಿಮಟ್ಟಿ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಬಾಗಲಕೋಟೆ ವಿಶ್ವವಿದ್ಯಾಲಯದ ಎನ್.ಎಸ್.ಎಸ್.ಸಂಯೋಜನಾಧಿಕಾರಿ ಜಿ.ಎಸ್ ಗೌಡರ , ಇಂಗ್ಲಿಷ್ ಉಪನ್ಯಾಸಕ ಡಿ.ವಾಯ್.ಬುಡ್ಡಿಯವರ ಸಮಾರಂಭದಲ್ಲಿ ಉಪಸ್ಥಿತರಿದ್ದರು.ರಾಜ್ಯಶಾಸ್ತ್ರ ಉಪನ್ಯಾಸಕ ನಾಗಲಿಂಗೇಶ ಬೆಣ್ಣೂರ ನಿರೂಪಿಸಿದರು. ಇತಿಹಾಸ ಉಪನ್ಯಾಸಕ ಡಾ.ಎ.ಎಮ್.ಗೊರಚಿಕ್ಕನವರ ವಂದಿಸಿದರು. ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ಬಿಎ 1,3,5 ನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ನೆಹರು ಯುವಕೇಂದ್ರದ ವತಿಯಿಂದ ಪ್ರಶಸ್ತಿ ಪತ್ರ ವಿತರಿಸಲಾಯಿತು.