ಆಗಸ್ಟ್ 1ರಂದು ಲಿಂ ಮಹಾಂತ ಸ್ವಾಮಿಗಳ 93 ನೆಯ ಹುಟ್ಟು ಹಬ್ಬದಂದು ರಕ್ತ ಗುಂಪು ತಪಾಸಣೆ ಮತ್ತು ಬೃಹತ್ ರಕ್ತದಾನ ಶಿಬಿರ.
ಹುನಗುಂದ ಜುಲೈ.26

ಮಹಾಂತ ಜೋಳಿಗೆಯ ಶಿವಶಿಲ್ಪಿಗಳು ಮತ್ತು ಬಸವತತ್ವದ ಹರಿಕಾರರಾದ ಲಿಂ. ಡಾll.ಮಹಾಂತ ಸ್ವಾಮಿಗಳ 93 ನೇ ಹುಟ್ಟು ಹಬ್ಬ ಪ್ರಯುಕ್ತ ಚಿತ್ತರಗಿ ವಿಜಯ ಮಹಾಂತೇಶ ಸಂಸ್ಥಾನಮಠ ಹುನಗುಂದ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಆ.1 ರಂದು ಬೆಳಿಗ್ಗೆ 9.30 ರಿಂದ 3.೦೦ ಗಂಟೆವರೆಗೆ ಪಟ್ಟಣದ ಬಸವ ಮಂಟಪದಲ್ಲಿ ರಕ್ತ ಗುಂಪು ತಪಾಸಣೆ ಹಾಗೂ 10 ನೇ ಬೃಹತ್ ರಕ್ತದಾನ ಶಿಬಿರ ಜರುಗಲಿದೆ ಎಂದು ವಿ.ಮ.ವಿ.ಸಂಘದ ಗೌರವ ಕಾರ್ಯದರ್ಶಿ ಡಾ.ಮಹಾಂತೇಶ ಕಡಪಟ್ಟಿ ಹೇಳಿದರು.
ಪಟ್ಟಣದ ವಿ.ಮ. ಸಂಘದ ಕಾರ್ಯಾಲಯದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ಮಾನವೀಯ ಜೀವನವನ್ನು ಉಳಿಸಲು ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು.ಚಿತ್ತರಗಿ ಸಂಸ್ಥಾನ ಮಠದ ಗುರುಮಹಾಂತ ಸ್ವಾಮಿಗಳು ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಮತ್ತು ಶಿರೂರಿನ ಡಾ.ಬಸವಲಿಂಗ ಸ್ವಾಮಿಗಳು ಸಾನಿಧ್ಯ ವಹಿಸುವರು.ವಿ.ಮ.ವಿ.ವ ಸಂಘದ ಕಾರ್ಯಧ್ಯಕ್ಷ ಡಾ.ವೀರಣ್ಣ ಚರಂತಿಮಠ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಹಿರಿಯ ದಿವಾಣಿ ನ್ಯಾಯಾಧೀಶರಾದ ಹನಮಂತರಾವ್.ಆರ್.ಕುಲಕರ್ಣಿ ಪ್ರಧಾನಿ ದಿವಾಣಿ ನ್ಯಾಯಾಧೀಶೆ ದೀಪಾ ಅರಳಗುಂಡಿ,ಅಪರ ದಿವಾಣಿ ನ್ಯಾಯಾಧೀಶ ಬಸವರಾಜ ನೇಸರಗಿ ಕಾರ್ಯಕ್ರಮವನ್ನು ಉಧ್ಘಾಟಿಸಲಿದ್ದಾರೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಎಂ.ಎಸ್. ಮಠ,ವೀರಣ್ಣ ಬಳೂಟಗಿ,ಡಾ.ಎಂ.ಬಿ ಗೊಂಗಡಿಶಟ್ಟಿ ಸೇರಿದಂತೆ ಅನೇಕರು ಇದ್ದರು.
ತಾಲೂಕ ವರದಿಗಾರರು:ಮಲ್ಲಿಕಾರ್ಜುನ.ಎಂ.ಬಂಡರಗಲ್ಲ. ಹುನಗುಂದ