ಇಂಡಿ ಜಿಲ್ಲಾ ಕೇಂದ್ರವನ್ನಾಗಿ ಘೋಷಣೆ ಮಾಡುವಂತೆ ಆಗ್ರಹಿಸಿ. ಪ್ರತಿಭಟನೆ.
ಇಂಡಿ ಡಿಸೆಂಬರ್.12

ತಾಲೂಕನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಘೋಷಣೆ ಮಾಡಬೇಕೆಂದು ಆಗ್ರಹಿಸಿ, ಮಂಗಳವಾರ ಸಮಗ್ರ ಇಂಡಿ ಕ್ಷೇಮಾಭಿವೃದ್ದಿ ಸಂಘ ಹಾಗೂ ಜಿಲ್ಲಾ ಹೋರಾಟ ಸಮಿತಿ ಮಿನಿ ವಿಧಾನ ಸೌಧದ ಮುಂದೆ ಕೆಲ ಹೊತ್ತು ಪ್ರತಿಭಟನೆ ಮಾಡಿ ಉಪ ಕಂದಾಯ ವಿಭಾಗಾಧಿಕಾರಿ ಅಬೀದ್ ಗದ್ಯಾಳ ಇವರ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳು ಕನಾ೯ಟಕ ಸರ್ಕಾರ ವಿಧಾನಸೌಧ ಬೆಂಗಳೂರು ಇವರಿಗೆ ಮನವಿಪತ್ರ ಸಲ್ಲಿಸಿದರು.ಸಮಗ್ರ ಇಂಡಿ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಮಂಜುನಾಥ ಕಾಮಗೊಂಡ ಮಾತನಾಡಿ, ಜಿಲ್ಲಾ ಕೇಂದ್ರಕ್ಕೆ ಯೋಗ್ಯವಾದ ಭೌಗೋಳಿಕ ಪ್ರದೇಶ ಮತ್ತು ಸರ್ಕಾರಿ ಕಚೇರಿಗಳನ್ನು ಹೊಂದಿರುವ ಇಂಡಿಯನ್ನು ಜಿಲ್ಲೆಯಾಗಿಸಬೇಕು. ಮತ್ತು ಇಂಡಿ ತಾಲೂಕನ್ನು ಆರ್ಟಿಕಲ್ಲ 371 (ಜೆ) ಅಡಿಯಲ್ಲಿ ಸೇರ್ಪಡೆ ಮಾಡಬೇಕು. ಈ ಬಗ್ಗೆ ಬೆಳಗಾಂವಿ ಅಧಿವೇಶನದಲ್ಲಿಯೇ ಚರ್ಚೆಯಾಗಬೇಕು. ಇಂಡಿ ಜಿಲ್ಲೆಯನ್ನಾಗಿಸುವಲ್ಲಿ ಇಂಡಿ ಕ್ಷೇಮಾಭಿವೃದ್ಧಿ ಸಂಘ ಯಾವದೇ ತ್ಯಾಗಕ್ಕೂ ಸಿದ್ಧ ಎಂದರು.ರಾಜಕೀಯ ಮುಖಂಡ ಪಾಪು ಕಿತ್ತಳಿ ಮಾತನಾಡಿ, ಸರ್ಕಾರ ನಮ್ಮ ಮನವಿ ಪರಿಗಣಿಸಿ ಇಂಡಿ ಜಿಲ್ಲಾ ಕೇಂದ್ರವನ್ನಾಗಿ ಘೋಷಿಸಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಪವಾಸ ಸತ್ಯಾಗ್ರಹ ಸೇರಿ ಇನ್ನಿತರ ಹಂತದ ಹೋರಾಟಗಳನ್ನು ಮಾಡಲಾಗುವದು ಎಂದು ಎಚ್ಚರಿಕೆ ನೀಡಿದರು.ಪುರಸಭೆಯ ಸದಸ್ಯ ಸತೀಶ ಕುಂಬಾರ ಮಾತನಾಡಿ, ಸಧ್ಯ ಸರ್ಕಾರದ ಆಡಳಿತ ಯಂತ್ರವೇ ಬೆಳಗಾವಿಯಲ್ಲಿದ್ದು, ಅಭಿವೃದ್ಧಿ ದೃಷ್ಠಿಯಿಂದ ಇಂಡಿಗೆ ಪ್ರತ್ಯೇಕ ಜಿಲ್ಲೆ ಸ್ಥಾನಮಾನ ನೀಡಬೇಕು. ಈ ಭಾಗದ ಬಹು ದಿನದ ಜಿಲ್ಲಾ ಬೇಡಿಕೆಗೆ ಸರ್ಕಾರ ಸ್ಪಂದಿಸಬೇಕು ಎಂದರು.ನಿವೃತ್ತ ಶಿಕ್ಷಕ ಜಿ.ವಿ. ಬಿರಾದಾರ ಮಾತನಾಡಿ, ಶಾಸಕ ಯಶವಂತರಾಯಗೌಡರಿಗೆ ಬೆಳಗಾವಿ ಸದನದಲ್ಲಿ ಧ್ವನಿ ಎತ್ತಲು ವಿನಂತಿಸಿಕೊಂಡಿದ್ದೇವೆ, ಶಾಸಕರು ಉತ್ತರ ಕರ್ನಾಟಕದ ಅಭಿವೃದ್ಧಿ ವಿಚಾರವಾಗಿ ಅಧಿವೇಶನದಲ್ಲಿ ಧ್ವನಿ ಎತ್ತುವುದಾಗಿ ಭರವಸೆ ನೀಡಿದ್ದಾರೆ ಎಂದರು.ಪ್ರತಿಭಟನೆಯಲ್ಲಿ ಡಾ, ರಮೇಶ ಪೂಜಾರಿ, ನಿವೃತ್ತ ಪ್ರಾಚಾರ್ಯ ಎ.ಸಿ.ಪಾಟೀಲ, ರಾಜಕೀಯ ಮುಖಂಡ ಜಗದೀಶ ಕ್ಷತ್ರಿ, ಕಿರಣಕುಮಾರ ಜೋಶಿ, ಪುರಸಭೆ ಸದಸ್ಯ ಅಯೂಬ ಬಾಗವಾನ, ತಾ.ಪಂ ಮಾಜಿ ಅಧ್ಯಕ್ಷ ಶೇಖರ ನಾಯಕ, ಅವಿನಾಶ ಬಗಲಿ, ಚನ್ನು ದೇವರ, ಮಹೇಶ ಮೈದರಗಿ, ರುಕ್ಮುದ್ದೀನ ಪಟೇಲ, ಸಂತೋಷ ಪರೆಶೇನ್ನವರ, ಮೇಘು ರಾಠೋಡ, ಬಾಲಾಜಿ ರಜಪೂತ, ರಮೇಶ ಅಡಗಲ್ಲ, ಉದ್ದಿಮೆದಾರ ಅನಂತ ಜೈನ, ನಿವೃತ್ತ ಪ್ರಾಚಾರ್ಯ ಎ.ಎಸ್.ಗಾಣಿಗೇರ ಪಾಲ್ಗೊಂಡಿದ್ದರು.ತಾಲೂಕ ವರದಿಗಾರರು:ಶಿವಪ್ಪ.ಬಿ.ಹರಿಜನ.ಇಂಡಿ