ಅತೀ ಶೀಘ್ರದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಲಾಗುವುದು – ಶಾಸಕ ಡಾll ವಿಜಯಾನಂದ ಕಾಶಪ್ಪನವರ.

ಹುನಗುಂದ ಸಪ್ಟೆಂಬರ್.1

ಪಟ್ಟಣದ ಕೇಂದ್ರ ಸ್ಥಾನದಲ್ಲಿ ಕಳೆದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮಹತ್ವಾಕಾಂಕ್ಷಿ ಯೋಜನೆಯಾದ ಕಡಿಮೆ ಖರ್ಚಿನಲ್ಲಿ ಬಡವರ ಹಸಿವು ನೀಗಿಸುವ ಉದ್ದೇಶದಿಂದ ನಿರ್ಮಾಣವಾಗಿರುವ ಇಂದಿರಾ ಕ್ಯಾಂಟಿನ್ ಶೀಘ್ರದಲ್ಲಿಯೇ ಆರಂಭಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಲಾಗುವುದು ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.ಪಟ್ಟಣದ ಟಿ.ಸಿ.ಎಚ್.ಕಾಲೇಜ ಆವರಣದಲ್ಲಿ ನಿರ್ಮಿಸಲಾಗಿರುವ ಇಂದಿರಾ ಕ್ಯಾಂಟಿನ್‌ಗೆ ಶಾಸಕರು ಭೇಟಿ ನೀಡಿ ಪರಿಶೀಲಿಸಿ ನಂತರ ಮಾತನಾಡಿದ ಅವರು ಇಂದಿರಾ ಕ್ಯಾಂಟಿನ್ ಪ್ರಾರಂಭವಾಗಿ ಸಾಕಷ್ಟು ಬಡಜನರಿಗೆ ಅನುಕೂಲವಾಗಬೇಕಿತ್ತು ಕಳೆದ ಸರ್ಕಾರದ ನಿರ್ಲಕ್ಷ್ಯ ಮತ್ತು ಅನೇಕ ಅಡೆತಡೆಗಳಿಂದ ನೆನೆಗುದುಗೆ ಬಿದ್ದಿರುವ ಇಂದಿರಾ ಕ್ಯಾಂಟಿನ್ ಆರಂಭಕ್ಕೆ ಕ್ಷಣಗಣನೇ ಆರಂಭವಾಗಿದೆ.ಕಳೆದ ನಮ್ಮ ಸರ್ಕಾರದ ಅವಧಿಯಲ್ಲಿ ನಿರ್ಮಾಣವಾಗಿ ಇಲ್ಲಿವರಗೂ ಕಾರ್ಯಾರಂಭವಾಗಿಲ್ಲ ಸಧ್ಯ ಮತ್ತೇ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸರ್ಕಾರ ಅಧಿಕಾರಕ್ಕೆ ಬಂದಿದ್ದು ಮತ್ತೇ ಸಿದ್ದರಾಮಯ್ಯನವರ ಮುಖ್ಯಮಂತ್ರಿಗಳಾಗಿದ್ದು.ಬಡವರ ಪರವಾಗಿರುವ ಈ ಯೋಜನೆಗೆ ಮತ್ತೇ ಜೀವಕಳೆ ತುಂಬಿದೆ.ಬಡ ಕೂಲಿ ಕಾರ್ಮಿಕ,ವಲಸಿಗರ ಹಸಿವು ನೀಗಿಸುವ ಮಹತ್ವದ ಯೋಜನೆಯಾದ ಇಂದಿರಾ ಕ್ಯಾಂಟೀನ್‌ಗೂ ಸಿದ್ದರಾಮಯ್ಯನವರ ಇಂದಿರಾ ಕ್ಯಾಂಟಿನ್‌ಗೆ ಹೆಚ್ಚಿನ ಆಧ್ಯತೆಯನ್ನು ನೀಡಿದ್ದರಿಂದ ಅತೀ ಶೀಘ್ರದಲ್ಲಿಯೇ ಹುನಗುಂದ ಪಟ್ಟಣದ ಇಂದಿರಾ ಕ್ಯಾಂಟಿನ್‌ನ್ನು ಆರಂಭಿಸಲಾಗುವುದು ಎಂದರು.ಈ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ಸತೀಶಕುಮಾರ ಚವಡಿ,ತಾಲೂಕಾ ಪಂಚಾಯತ ಇಓ ಮುರಳೀಧರ ದೇಶಪಾಂಡೆ,ಪಿ.ಎಸ್.ಐ ಚನ್ನಯ್ಯ ದೇವೂರ,ಮುಖಂಡ ಮುತ್ತಣ್ಣ ಕಲಗೋಡಿ ಸೇರಿದಂತೆ ಅನೇಕರು ಇದ್ದರು.

ತಾಲೂಕ ವರದಿಗಾರರು:ಮಲ್ಲಿಕಾರ್ಜುನ ಎಂ.ಬಂಡರಗಲ್ಲ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.
Back to top button