ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ಆಯ್ಕೆ ಸಭೆ.
ದೇವನಹಳ್ಳಿ ಸಪ್ಟೆಂಬರ್.26

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪ್ರವಾಸಿ ಮಂದಿರದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯನ್ನು ರಾಜ್ಯ ಸಂಚಾಲಕರಾದ ಡಿ ಆರ್ ಪಾಂಡುರಂಗಸ್ವಾಮಿ ರವರ ಅಧ್ಯಕ್ಷತೆಯಲ್ಲಿ ರಚನೆ ಮಾಡಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಸಂಚಾಲಕರಾದ ತರೀಕೆರೆ ಎನ್ ವೆಂಕಟೇಶ್, ಕೊಡಿಗಲ್ ರಮೇಶ್, ರಾಜ್ಯ ಖಜಾಂಚಿ ಎಚ್ ಮುನಿಯಪ್ಪ, ಬೆಂಗಳೂರು ರಾಜ್ಯ ವಿಭಾಗೀಯ ಸಂಚಾಲಕರಾದ ಮ್ಯಾತೂ ಮುನಿಯಪ್ಪ, ಕರ್ನಾಟಕ ದಲಿತ ಮಹಿಳಾ ಒಕ್ಕೂಟದ ರಾಜ್ಯ ಸಂಚಾಲಕಿಯಾದ ನವ್ಯ ಶ್ರೀ, ರಾಜ್ಯ ನೌಕರರ ಸಂಘದ ಅಧ್ಯಕ್ಷರಾದ ಕರಿಸಿದ್ದಯ್ಯ, ರಾಜ್ಯ ಸಮಿತಿ ಸದಸ್ಯರಾದ ಆರ್ ಶಿವಕುಮಾರ್, ದಾವಣಗೆರೆ ಜಿಲ್ಲಾ ಸಂಚಾಲಕರಾದ ಹರಿಹರ ಶ್ರೀನಿವಾಸ್, ಚಿಕ್ಕಬಳ್ಳಾಪುರ ಜಿಲ್ಲಾ ಸಂಘಟನಾ ಸಂಚಾಲಕರಾದ ಕೆ ವೆಂಕಟರಮಣಪ್ಪ, ಚಿತ್ರದುರ್ಗ ಜಿಲ್ಲಾ ಸಂಘಟನಾ ಸಂಚಾಲಕರಾದ ಪ್ರಸನ್ನಕುಮಾರ, ಮಂಜು ದಾಸಿಕಟ್ಟೆ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಂಚಾಲಕರಾಗಿ ಕೆ ಪಿ ಡ್ಯಾನಿವೆಲ್ ಮುನಿಯಪ್ಪ, ಜಿಲ್ಲಾ ಸಂಘಟನಾ ಸಂಚಾಲಕರಾಗಿ ರವಿ ಸೋಲೋಮೆನ್, ದೇವರಾಜ್, ಹರೀಶ್, ಸಿ ಮಂಜುನಾಥ ರವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಜಿಲ್ಲಾ ವರದಿಗಾರರು:ಎನ್.ವೆಂಕಟೇಶ್.ತರೀಕೆರೆ