ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ.

ಖಾನಾಪುರ ಏಪ್ರಿಲ್.08

ದೇವರ ಹಿಪ್ಪರಗಿ ತಾಲೂಕಿನ ಖಾನಾಪುರ ಗ್ರಾಮದ ಮಲ್ಲಿಕಾರ್ಜುನ್ ಮಾನಪ್ಪ ವಿಶ್ವಕರ್ಮ ಇವರು ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಗೊಂಡರು,ದೇವರ ಹಿಪ್ಪರಗಿ ತಾಲ್ಲೂಕು ಹುಣಶ್ಯಾಳ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಪ್ರಚಾರ ಸಭೆಯ ಕಾರ್ಯಕ್ರಮದಲ್ಲಿ ವಿಜಯಪುರ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಪೋ .ರಾಜು ಆಲಗೂರ ಇವರ ಸಮ್ಮುಖದಲ್ಲಿ ದೇವರ ಹಿಪ್ಪರಗಿ ಮತಕ್ಷೇತ್ರದ ಹುಣಶ್ಯಾಳ ಗ್ರಾಮದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾಜಿ ಶಾಸಕ ಶರಣಪ್ಪ ಸುಣಗಾರ ಪ್ರಭುಗೌಡ ಪಾಟೀಲ ಲಿಂಗದಳ್ಳಿ ಆನಂದ ದೊಡಮನಿ ಬಿ ಎಸ್ ಪಾಟೀಲ್ ಯಾಳಗಿ ಬಸಿರ್ ಬೆಪಾರಿ ರಮೇಶ್ ಗುಭ್ಭೇವಾಡ್ ಮೈನುದ್ದೀನ್ ಭಗವಾನ್ ರಾಜಕೀಯ ಮುಖಂಡರ ಸಮ್ಮುಖದಲ್ಲಿ ಪಕ್ಷ ಸೇರ್ಪಡೆ ಗೊಂಡರು.

ತಾಲೂಕ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಭೀಮಪ್ಪ.ಹಚ್ಯಾಳ. ದೇವರ ಹಿಪ್ಪರಗಿ.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button