ಅಲ್ಪಸಂಖ್ಯಾತರ ಕಾಲೋನಿಗಳಲ್ಲಿ ಮೂಲಭೂತ ಸೌಕರ್ಯಗಳಿಗೆ 5. ಕೋಟಿ ವೆಚ್ಚದಲ್ಲಿ ಕಾಮಗಾರಿಗಳಿಗೆ – ಚಾಲನೆ ನೀಡಿದ ಶಾಸಕರು.
ನಾಗಸಮುದ್ರ ಮಾರ್ಚ್.7

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಕೊಂಡ್ಲಹಳ್ಳಿ ರಾಂಪುರ ಬೊಮ್ಮಕನಹಳ್ಳಿ ಇಸ್ಲಾಂಪುರ ನಾಗಸಮುದ್ರ ಅಲ್ಪಸಂಖ್ಯಾತರ ಕಾಲೋನಿಗಳಲ್ಲಿ ಮೂಲಭೂತ ಸೌಕರ್ಯಗಳಿಗೆ 5 ಕೋಟಿ ವೆಚ್ಚದಲ್ಲಿ ಕಾಮಗಾರಿಗಳಿಗೆ ಚಾಲನೆ ನೀಡಿದ ಜನನಾಯಕ ಎನಿಸಿಕೊಂಡರು.

ಜನಾರ್ಧನ ಜನಸೇವೆ ಗೋಸ್ಕರ ಅಭಿವೃದ್ಧಿ ಹರಿಕಾರರು ಮೊಳಕಾಲ್ಮೂರು ಕ್ಷೇತ್ರದ ಎನ್ ವೈ ಗೋಪಾಲಕೃಷ್ಣ ಶಾಸಕರು ಕಾಮಗಾರಿಗಳಿಗೆ ಚಾಲನೆ ನೀಡಿದರು. ನಾಗರಿಕರ ಕೆಲಸಗಳು ಎಲ್ಲಾ ಸಮುದಾಯದ ರೈತರಿಗೆ ಕುಡಿಯಲು ನೀರು ದನ ಕರುಗಳಿಗೆ ಮೇವು ಚರಂಡಿ ವ್ಯವಸ್ಥೆ ರೈತರಿಗೆ ಅನುಕೂಲವಾಗುವ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಇವೆಲ್ಲವನ್ನು ಅತಿ ಶೀಘ್ರದಲ್ಲಿ ಮಾಡಬೇಕೆಂದು ಜನಾರ್ಧನ ಎಂದು ಬಿರುದು ಪಡೆದ ಅಭಿವೃದ್ಧಿ ಹರಿಕಾರರಾದ ಎನ್ ವೈ ಗೋಪಾಲಕೃಷ್ಣ ಶಾಸಕರ ಹೆಬ್ಬಯಕೆವಾಗಿದೆ ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಜನ ಪ್ರತಿನಿಧಿಗಳು ತಾಲೂಕಿನ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು ಎಂದು ವರದಿಯಾಗಿದೆ.
ತಾಲೂಕ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ತಿಪ್ಪೇಸ್ವಾಮಿ.ಹೊಂಬಾಳೆ.ಮೊಳಕಾಲ್ಮುರು