ಕರ್ನಾಟಕ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷರಾಗಿ ಸಾಲುಮನಿ ರಾಘವೇಂದ್ರ ಆಯ್ಕೆ.

ಕೂಡ್ಲಿಗಿ ಅಕ್ಟೋಬರ್.4

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ಪತ್ರಕರ್ತರ ಸಂಘದ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು ಈ ಸಭೆಯಲ್ಲಿ ಕೂಡ್ಲಿಗಿ ತಾಲೂಕು ಅಧ್ಯಕ್ಷರನ್ನು ಆಯ್ಕೆ ಮಾಡುವ ಕುರಿತು ಸಭೆಯನ್ನು ಕರ್ನಾಟಕ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯರು ಸಮ್ಮುಖದಲ್ಲಿ ಸಭೆಯನ್ನು ಕರೆಯಲಾಯಿತು. ಈ ಸಭೆಯಲ್ಲಿ ಕೂಡ್ಲಿಗಿ ತಾಲೂಕಿನ ಕರ್ನಾಟಕದ ಸಂಘದ ಎಲ್ಲಾ ಸದಸ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸದಸ್ಯರು ಒಮ್ಮತದಿಂದ ಕರ್ನಾಟಕ ಪತ್ರಕರ್ತ ಸಂಘದ ತಾಲೂಕು ಅಧ್ಯಕ್ಷರನ್ನಾಗಿ ಸಾಲುಮನಿ ರಾಘವೇಂದ್ರ ಅವಿರೋಧವಾಗಿ ಆಯ್ಕೆಯಾಗಿದ್ದರು. ಈ ವೇಳೆ ನೂತನ ಅಧ್ಯಕ್ಷ ಸಾಲುಮನಿ ರಾಘವೇಂದ್ರ ಮಾತನಾಡಿ ಈ ಸಂಘದಲ್ಲಿ ನನಗೆ ಕೊಟ್ಟಂತ ಹುದ್ದೆಯನ್ನು ಜವಾಬ್ದಾರಿಯುತವಾಗಿ ನಿರ್ವಹಿಸುತ್ತೇನೆ. ಏನೇ ಬಂದರು ನಾವೆಲ್ಲರೂ ನಮ್ಮ ಸಂಘದ ವತಿಯಿಂದ ಒಳ್ಳೆಯ ಕೆಲಸ ಕಾರ್ಯಗಳನ್ನು ಮಾಡಬೇಕೆಂದು ತಿಳಿಸಿದರು. ಈ ಸಂದರ್ಭದಲ್ಲಿ ರಾಜ್ಯ ಕಮಿಟಿ ಸದಸ್ಯರಾದ ಡಿ‌.ಎಂ ಈಶ್ವರಪ್ಪ, ಮುರಳಿಧರ ಮಾತನಾಡಿದರು. ಈ ಸಂದರ್ಭದಲ್ಲಿ ಸಂಘದ ತಾಲೂಕು ಗೌರವಾಧ್ಯಕ್ಷ ತಿಪ್ಪೇಸ್ವಾಮಿ ಮೀನಕೆರೆ, ತಾಲೂಕು ಪ್ರಧಾನ ಕಾರ್ಯದರ್ಶಿ ಲಿಂಬ್ಯಾ ನಾಯ್ಕ್ ಜೆ, ಉಪಾಧ್ಯಕ್ಷರಾಗಿ ಬಸವರಾಜಸ್ವಾಮಿ, ಕಾರ್ಯಧ್ಯಕ್ಷರಾಗಿ ಗುನ್ನಳ್ಳಿ ರಾಘವೇಂದ್ರ, ಸದಸ್ಯರಾದ ಹೊನ್ನೂರಪ್ಪ, ಭಾಗ್ಯಮ್ಮ ಸೇರಿದಂತೆ ಇತರೆ ಪತ್ರಕರ್ತರು ಇದ್ದರು ಎಂದು ವರದಿಯಾಗಿದೆ.

ತಾಲೂಕ ವರದಿಗಾರರು:ತಿಪ್ಪೇಸ್ವಾಮಿ.ಹೊಂಬಾಳೆ. ಮೊಳಕಾಲ್ಮುರು

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.
Back to top button