ವಿಧ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ.
ಕೊಟ್ಟೂರು ಫೆಬ್ರುವರಿ.2

ಕೊಟ್ಟೂರಿನ ಭಾಗೀರಥಿ ಪದವಿಪೂರ್ವ ಕಾಲೇಜಿನಲ್ಲಿ ಶುಕ್ರವಾರ ರಂದು ಶಾರದ ಪೂಜೆ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.ಮುಖ್ಯ ಅತಿಥಿಗಳಾಗಿ ತಹಸಿಲ್ದಾರ್ ಅಮರೇಶ್ ಜಿ ಕೆ ರವರು ಆಗಮಿಸಿ ವಿದ್ಯಾರ್ಥಿಗಳನ್ನು ಕುರಿತು ಮಾತನಾಡಿದರು ಸದಾ ಪುಸ್ತಕಗಳನ್ನು ನಿಮ್ಮ ಜೊತೆಯಲ್ಲಿ ತೆಗೆದು ಕೊಂಡು ಹೋಗಿ ಪುಸ್ತಕ ಓದುವ ಹವ್ಯಾಸ ಬೆಳೆಸಿ ಕೊಳ್ಳಿ ಹಾಗೂ ಬಾಹ್ಯವಾಗಿ ಸುಂದರ ವಾಗಿರೋದಕ್ಕಿಂತ ಬದುಕನ್ನು ಸುಂದರವಾಗಿಸಿ ಕೊಳ್ಳಿ ಎಂದು ಹೇಳಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿರ್ಮಲ ಶಿವನಗುತ್ತಿ ಅವರು ವಹಿಸಿಕೊಂಡಿದ್ದರು. ಅತಿಥಿಗಳಾಗಿ ಶಿವನಗುತ್ತಿ ಸರ್,ಕಾಲೇಜಿನ ಕಾರ್ಯದರ್ಶಿಗಳಾದ ರಜತ್ ರವರು ವಹಿಸಿಕೊಂಡಿದ್ದರು.
ತಾಲೂಕ ವರದಿಗಾರರು:ಪ್ರದೀಪ್.ಕುಮಾರ್.ಸಿ.ಕೊಟ್ಟೂರು

