ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ – ಗೀತಾಂಜಲಿ ಸಿಂಧೆ ಪಿ.ಎಸ್.ಐ.
ಕೊಟ್ಟೂರು ಡಿ. 20

ಕೊಟ್ಟೂರು ತಾಲೂಕಿನ ಕೊಟ್ಟೂರು ಪಟ್ಟಣದ ಮುಖ್ಯ ರಸ್ತೆಗಳಲ್ಲಿ ಬೈಕ್ ರ್ಯಾಲಿ ಮಾಡುವುದರ ಮೂಲಕ ಕೊಟ್ಟೂರು ಪಿ.ಎಸ್.ಐ ಗೀತಾಂಜಲಿ ಸಿಂಧೆಯವರು ಸಾರ್ವಜನಿಕರಿಗೆ ಹೆಲ್ಮೆಟ್ ನೀಡಿ ಬೈಕ್ ಸವಾರರು ಹೆಲ್ಮೆಟ್ ಕಡ್ಡಾಯವಾಗಿ ಧರಿಸ ಬೇಕು ಆಕಸ್ಮಿಕವಾಗಿ ಅಪಘಾತ ಗಳಾದಾಗ ಹೆಚ್ಚಿನ ರೀತಿ ತೊಂದರೆಗಳು ಆಗುವುದಿಲ್ಲ ಹೀಗಾಗಿ ಇತ್ತೀಚಿನ ದಿನಗಳಲ್ಲಿ ಚಿಕ್ಕ ಚಿಕ್ಕ ಮಕ್ಕಳು ಸಹ ಬೈಕ್ ನಡೆಸುತ್ತಾರೆ 18 ವರ್ಷದ ಒಳಗಿನ ಮಕ್ಕಳಿಗೆ ಪೋಷಕರು ಬೈಕ್ ಕೊಡಬಾರದು.


ಪ್ರತಿಯೊಬ್ಬ ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ಇತರರಿಗೂ ಮಾದರಿಯಾಗಿ ಜೀವವನ್ನು ರಕ್ಷಿಸಿ ಕೊಂಡು ನಿಮ್ಮನ್ನೇ ನಂಬಿರುವ ಕುಟುಂಬಗಳಿಗೆ ಚಿರ ಋಣಿಯಾಗಿರಿ ಎಂದು ಗೀತಾಂಜಲಿ ಸಿಂಧೆ ಪಿ.ಎಸ್.ಐ ಮತ್ತು ಸಿಬ್ಬಂದಿ ವರ್ಗದವರು ರ್ಯಾಲಿ ಮಾಡುವುದರ ಮೂಲಕ ಜಾಗೃತಿ ಮೂಡಿಸಿದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಪ್ರದೀಪ್.ಕುಮಾರ್.ಸಿ.ಕೊಟ್ಟೂರು