ಪೌರ ಕಾರ್ಮಿಕರಿಗೆ ಖಾಯಂ ಆದೇಶ ಪತ್ರ ವಿತರಣೆ.

ತರೀಕೆರೆ ಅಕ್ಟೋಬರ್.8

ಕಳೆದ 15 ವರ್ಷಗಳಿಂದ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡಿ ನಂತರ ಸರ್ಕಾರದ ಮಾರ್ಗ ಸೂಚಿಯಂತೆ ನೇರ ಪಾವತಿಯಲ್ಲಿ ಕೆಲಸ ಮಾಡುತ್ತಿದ್ದ 9 ಜನ ಪೌರ ಕಾರ್ಮಿಕರನ್ನು ಖಾಯಂ ನೇಮಕಾತಿ ಮಾಡಲಾಯಿತು ಎಂದು ಜಿಲ್ಲಾ ಸಪಾಯಿ ಕರ್ಮಚಾರಿ ಜಾಗೃತಿ ಸಮಿತಿ ಸದಸ್ಯರಾದ ತರೀಕೆರೆ ಎನ್ ವೆಂಕಟೇಶ್ ರವರು ಶನಿವಾರ ಪುರಸಭೆ ಕಾರ್ಯಾಲಯದಲ್ಲಿ ಪೌರ ಕಾರ್ಮಿಕರಿಗೆ ಖಾಯಂ ನೇಮಕಾತಿ ಆದೇಶ ಪತ್ರ ವಿತರಿಸಿ ಮಾತನಾಡಿದರು. ಇನ್ನೂ 14 ಮಂದಿ ಪೌರಕಾರ್ಮಿಕರ ಹುದ್ದೆಗಳು ಖಾಲಿ ಇರುವುದರಿಂದ ಸರ್ಕಾರಕ್ಕೆ ನೇಮಕಾತಿ ಮಾಡಿಕೊಳ್ಳಲು ಪ್ರಸ್ತಾವನೆಯನ್ನು ಜಿಲ್ಲಾಧಿಕಾರಿಗಳ ಮುಖಾಂತರ ಕಳಿಸಿ ಕೊಡಲು ತಿಳಿಸಿದರು. ಇದೇ ಸಂದರ್ಭದಲ್ಲಿ ಪುರಸಭಾ ಅಧ್ಯಕ್ಷರಾದ ಪರಮೇಶ್ ಮಾತನಾಡಿ ಪೌರ ಕಾರ್ಮಿಕರಿಗೆ ಖಾಯಂ ಆಗಿ ನೇಮಕಾತಿ ಮಾಡಿರುವುದು ಅವರ ಜೀವನಕ್ಕೆ ಒಂದು ಭದ್ರತೆ ಸಿಕ್ಕಂತಾಗಿದೆ ಎಂದು ಹೇಳಿದರು. ಪುರಸಭಾ ಮುಖ್ಯ ಅಧಿಕಾರಿ ಎಚ್ ಪ್ರಶಾಂತ್ ರವರು ಮಾತನಾಡಿ ನೆನ್ನೆ ಪೌರ ಕಾರ್ಮಿಕರ ಕುಂದು ಕೊರತೆ ಸಭೆ ಮಾಡಿ ಅವರಿಗೆ ವಸತಿ ಸವಲತ್ತು, ಸಪಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದಿಂದ ದೊರೆಯುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲಾಯಿತು ಮತ್ತು ಅವರ ಕುಂದು ಕೊರತೆಗಳನ್ನು ಆಲಿಸಲಾಯಿತು ಎಂದು ಹೇಳಿದರು. ಈ ಸಂದರ್ಭದಲ್ಲಿ ಹಿರಿಯ ಆರೋಗ್ಯ ಅಧಿಕಾರಿ ಮಹೇಶ್ ಮತ್ತು ಪತ್ರಕರ್ತರಾದ ಎಸ್ಎನ್ ಸಿದ್ದರಾಮಪ್ಪ ಉಪಸ್ಥಿತರಿದ್ದರು.

ಜಿಲ್ಲಾ ವರದಿಗಾರರು:ಎನ್.ವೆಂಕಟೇಶ್.ತರೀಕೆರೆ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.
Back to top button