ಸೂಳೇಭಾವಿಯಲ್ಲಿ ಕಾರ್ಮಿಕ ಆಯವ್ಯಯ ತಯಾರಿಕೆ ಅಭಿಯಾನಕ್ಕೆ ಚಾಲನೆ.
ಸೂಳೇಭಾವಿ ಅಕ್ಟೋಬರ್.13

2024-25 ನೇ ಸಾಲಿನ ಕಾರ್ಮಿಕರ ಆಯವ್ಯಯ ತಯಾರಿಸುವ ಸಲುವಾಗಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯಡೆಗೆ ಅಭಿಯಾನಕ್ಕೆ ಹುನಗುಂದ ತಾಲೂಕಿನ ಸೂಳೇಭಾವಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಅಧ್ಯಕ್ಷರಿಂದ ಬೇಡಿಕೆಗಳನ್ನು ಸ್ವೀಕರಿಸುವ ಮೂಲಕ ಚಾಲನೆ ನೀಡಲಾಯಿತು.ಬಳಿಕ ಮಾತನಾಡಿದ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸಂಗಣ್ಣ ಕಳ್ಳೋಳಿ ಮಾತನಾಡಿ, 2024 – 25ನೇ ಕಾರ್ಮಿಕ ಆಯವ್ಯಯ ತಯಾರಿಸುತ್ತಿದ್ದು, ಪ್ರತಿ ವಾರ್ಡ್ ನಲ್ಲಿ ಕಾರ್ಮಿಕರ ಅನುಕೂಲ ವಾಗುವಂತಹ ಕಾಮಗಾರಿಗಳನ್ನು ನೀಡಲು ತಿಳಿಸಿ ಎಂದು ಸದಸ್ಯರಿಗೆ ತಿಳಿಸಿದರು. ವೈಯಕ್ತಿಕ ಕಾಮಗಾರಿಗಳ ಹೆಚ್ಚು ಗಮನ ಹರಿಸಿ ಎಂದು ತಿಳಿಸಿದರು.ಐಇಸಿ ಸಂಯೋಜಕ ಬಸವರಾಜ ಕೊಪ್ಪದ, ಗ್ರಾಮಸ್ಥರಿಗೆ ಹಾಗೂ ಗ್ರಾಪಂ ಸದಸ್ಯರಿಗೆ 2023-24 ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸುತ್ತಿದ್ದು, ವೈಯಕ್ತಿಕ ಕಾಮಗಾರಿಗಳ ಹಾಗೂ ಸಮುದಾಯ ಕಾಮಗಾರಿಗಳ ಬಗ್ಗೆ ಮಾಹಿತಿ ನೀಡಿ, ವೈಯಕ್ತಿಕ ಕಾಮಗಾರಿಗಳ ಹೆಚ್ಚಿನ ಗಮನಹರಿಸಿ ಎಂದು ತಿಳಿಸಿದರು. ಜೊತೆಗೆ ಕೂಸಿನ ಮನೆ ಪ್ರಾರಂಭದ ಬಗ್ಗೆ ಮಾಹಿತಿ ನೀಡಿದರು.ಈ ಸಂದರ್ಭದಲ್ಲಿ ಐಇಸಿ ಸಂಯೋಜಕ ಬಸವರಾಜ ಕೊಪ್ಪದ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂಗಣ್ಣ ಕಳ್ಳೋಳಿ, ಗ್ರಾಮ ಪಂಚಾಯತಿ ಕಾರ್ಯದರ್ಶಿ ಎಸ್ ಡಿ. ಗೌಡರ, ಗ್ರಾಪಂ ಅಧ್ಯಕ್ಷ ಪಿಡ್ಡಪ್ಪ ಕುರಿ, ಸರ್ವ ಸದಸ್ಯರು, ಬಿಲ್ ಕಲೆಕ್ಟರ್ ವಾಯ್. ಎಚ್. ಕೋರಿ, ಬಿಎಫ್ ಟಿ ಸಂತೋಷ ಅಕ್ಕಿ, ಡಾಟಾ ಎಂಟ್ರಿ ಆಪರೇಟರ್ ಎಸ್. ಆರ್. ಕೊಳ್ಳಿ ಉಪಸ್ಥಿತರಿದ್ದರು.