ಕಾನಾ ಹೊಸಹಳ್ಳಿ ನಾಡ ಕಚೇರಿಗೆ ನೂತನ ತಹಶೀಲ್ದಾರ್ ಎಂ.ರೇಣುಕಾ ಭೇಟಿ.

ಕಾನಾ ಹೊಸಹಳ್ಳಿ ಅಕ್ಟೋಬರ್.19

ಇಲ್ಲಿನ ನಾಡ ಕಚೇರಿಗೆ ನೂತನ ತಹಶೀಲ್ದಾರ್ ತಾಲೂಕ ದಂಡಾಧಿಕಾರಿ ಎಂ.ರೇಣುಕಾ ಅವರು ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ನೂತನ ತಹಶೀಲ್ದಾರರಿಗೆ ನಾಡ ಕಚೇರಿಯಿಂದ ಗೌರವ ಸನ್ಮಾನಿಸಿದರು. ದಂಡಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಪ್ರಥಮ ಬಾರಿಗೆ ಕಾನ ಹೊಸಹಳ್ಳಿ ನಾಡ ಕಚೇರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ವೇಳೆ ಅಧಿಕಾರಿಗಳಿಗೆ ಈ ಕಿವಿ ಮಾತು ಹೇಳಿದರು. ಅಧಿಕಾರಿಗಳು ಒಂದು ತಂಡವಾಗಿ ಒಗ್ಗಟ್ಟಾಗಿ ಕೆಲಸ‌ ನಿರ್ವಹಿಸಿ ಜನರ ಸಮಸ್ಯೆಗೆ ಸ್ಪಂದಿಸಬೇಕು. ಪ್ರೀತಿ, ವಿಶ್ವಾಸ ಮತ್ತು ನಂಬಿಕೆಯಿಂದ ಕೆಲಸ ನಿರ್ವಹಿಸಬೇಕು, ಸಾರ್ವಜನಿಕರು ತಮ್ಮ ಕೆಲಸಗಳಿಗಾಗಿ ಕಚೇರಿಗೆ ಬಂದಾಗ ಅವರನ್ನು ಕಾಯಿಸಬೇಡಿ ಎಂದು ಹೇಳಿದರು. ಈ ಸಂದರ್ಭದಲ್ಲಿ ಕಂದಾಯ ಪರೀಕ್ಷಕರಾದ ಮುರಳಿ ಕೃಷ್ಣ, ಗ್ರಾಮ ಆಡಳಿತ ಅಧಿಕಾರಿಗಳಾದ ಚನ್ನಬಸಯ್ಯ, ಸಂಪ್ರೀತ, ಚೈತ್ರ, ಅನಿತಾ, ಜ್ಯೋತಿ ಹಾಗೂ ಗ್ರಾಮ ಸಹಾಯಕರಾದ ಶಾಂತರಾಜ್, ಬೋರಪ್ಪ, ತಿಪ್ಪೇಸ್ವಾಮಿ ಸೇರಿದಂತೆ ಸಾರ್ವಜನಿಕರು ಇತರರು ಉಪಸ್ಥಿತರಿದ್ದರು.

ಹೋಬಳಿ ವರದಿಗಾರರು:ಕೆ.ಎಸ್.ವೀರೇಶ್ ಕಾನಹೊಸಹಳ್ಳಿ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.
Back to top button