ಹೂವಿನಹಳ್ಳಿಯಲ್ಲಿ ಕಾರ್ಮಿಕ ಆಯವ್ಯಯ ತಯಾರಿಕಾ ಅಭಿಯಾನಕ್ಕೆ ಚಾಲನೆ.
ಹೂವಿನಹಳ್ಳಿ ಅಕ್ಟೋಬರ್.21
![](https://i0.wp.com/sknewskannada.in/wp-content/uploads/2023/10/IMG-20231021-WA0023.jpg?resize=708%2C411&ssl=1)
2024-25 ನೇ ಸಾಲಿನ ಕಾರ್ಮಿಕರ ಆಯವ್ಯಯ ತಯಾರಿಸುವ ಸಲುವಾಗಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯಡೆಗೆ ಅಭಿಯಾನಕ್ಕೆ ಹುನಗುಂದ ತಾಲೂಕಿನ ಹೂವಿನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆಂಪಿ ಕೆರೆಯಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷ ಮುದ್ದಪ್ಪ ಕೊಳಮಲಿ ಚಾಲನೆ ನೀಡಿದರು.ಈ ವೇಳೆ ಮಾತನಾಡಿದ ಐಇಸಿ ಸಂಯೋಜಕ ಬಸವರಾಜ ಕೊಪ್ಪದ, 2023-24ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸುತ್ತಿದ್ದು, ಕೃಷಿ ಹೊಂಡ, ದನದ ಶೆಡ್ ಸೇರಿದಂತೆ ವೈಯಕ್ತಿಕ ಕಾಮಗಾರಿಗಳ ಹಾಗೂ ಸಮುದಾಯ ಕಾಮಗಾರಿಗಳ ಬಗ್ಗೆ ಮಾಹಿತಿ ನೀಡಿದರು. ಜೊತೆಗೆ, ಒಂದು 2.5 ಲಕ್ಷದಿಂದ 5 ಲಕ್ಷಕ್ಕೆ ವೈಯಕ್ತಿಕ ಕಾಮಗಾರಿಗಳ ಹೆಚ್ಚಳವಾದ ಮೊತ್ತದ ಬಗ್ಗೆ ತಿಳಿಸಿದರು.ಬಳಿಕ ಕೂಲಿ ಕಾರ್ಮಿಕರು ತಮ್ಮಗೆ ಬೇಕಾದ ಕಾಮಗಾರಿಗಳ ಬೇಡಿಕೆ ಸಲ್ಲಿಸಿದರು. ಬಳಿಕ ಮಾತನಾಡಿದ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ರಾಘವೇಂದ್ರ ಹುಣಶ್ಯಾಳ , ಕಾರ್ಮಿಕ ಆಯವ್ಯಯ ತಯಾರಿಸುತ್ತಿದ್ದು, ಕಾರ್ಮಿಕರಿಗೆ ಅವಶ್ಯಕತೆ ಇರುವ ಕಾಮಗಾರಿಗಳನ್ನು ಬೇಡಿಕೆ ಡಬ್ಬದಲ್ಲಿ ಹಾಕಿದರೇ ಅಧ್ಯಕ್ಷರು, ಸರ್ವ ಸದಸ್ಯರ ಸಮ್ಮುಖದಲ್ಲಿ ಕ್ರಿಯಾ ಯೋಜನೆಯಲ್ಲಿ ಪಟ್ಟಿ ಮಾಡುತ್ತೇವೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಐಇಸಿ ಸಂಯೋಜಕ ಬಸವರಾಜ ಕೊಪ್ಪದ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ರಾಘವೇಂದ್ರ ಹುಣಶ್ಯಾಳ, ತಾಂತ್ರಿಕ ಸಹಾಯಕ ಅಜಿತ್ ಕೊಣ್ಣೂರ, ಗ್ರಾಪಂ ಅಧ್ಯಕ್ಷ ಮುದ್ದಪ್ಪ ಕೊಳಮಲಿ, ಬಿಎಫ್ ಟಿ ಸಂತೋಷ ಅಕ್ಕಿ, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗ, ಕಾಯಕ ಬಂಧುಗಳು ಉಪಸ್ಥಿತರಿದ್ದರು.