“ವ್ಯೂಹ” ಚಿತ್ರದ ಪದೆ ಪದೆ ನೆನಪಾಗಿದೆ ಹಾಡು ಬಿಡುಗಡೆ …

ಬೆಳಗಾವಿ ಅಕ್ಟೋಬರ್.25 :-

ಎಸ್ ಡಿ ಫಿಲ್ಮ್ಸ್ ಮತ್ತು ಮೂರು ಬಿಟ್ಟವರು ಎಂಟರ್ಟೈನ್ಮೆಂಟ್ ಬ್ಯಾನರನ ಅಡಿಯಲ್ಲಿ ನಿರ್ಮಾಣವಾಗಿರುವ ಅಪ್ಪಟ ಉತ್ತರ ಕರ್ನಾಟಕದ ಪ್ರತಿಭೆಗಳೇ ಸೇರಿ ಮಾಡಿರುವಂತಹ ” ವ್ಯೂಹ ” ಕನ್ನಡ ಚಲನ ಚಿತ್ರದ ‘’ಪದೆ ಪದೆ ನೆನಪಾಗಿದೆ ಅದೇ ಕಥೆ ನೆನೆದು” ಮೊದಲ ಲಿರಿಕಲ್ ಹಾಡು ಮಾಸ್ ಮ್ಯೂಸಿಕ್ ಅಡ್ಡಾ ಯ್ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆ ಮಾಡಲಾಯಿತು.

ಕೋವಿಡ್ ಸಮಯದಲ್ಲಿ ನಡೆಯುವಂತಹ ಒಂದು ಸಸ್ಪೆನ್ಸ್ ಥ್ರಿಲ್ಲರ್ ಡ್ರಾಮಾ ಕಥೆ ಇದಾಗಿದ್ದು , ಯಾರು ಒಳ್ಳೆಯವರು ಅಲ್ಲಾ ಹಾಗೇ ಕೆಟ್ಟವರು ಅಲ್ಲಾ, ಮನುಷ್ಯನ ಪರಿಸ್ಥಿತಿ ಆತನನ್ನು ಕೆಟ್ಟವನು, ಒಳ್ಳೆಯವನಾಗಿ ಮಾಡುತ್ತೆ ಎನ್ನುವುದೇ ಚಿತ್ರದೊಳಗೆ ಅಡಗಿರುವ ಕಥೆ. ಬೆಳಗಾವಿ ಸುತ್ತ ಮುತ್ತಲು ಚಿತ್ರೀಕರಣ ನಡೆಸಲಾದ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ಸೂರಜ್ ದೇಸಾಯಿ, ಪ್ರವೀಣ ಸುತಾರ, ದೀಪಶ್ರೀ ಗೌಡ, ಮಾನಸಿ ಶಿವನಗೇಕರ್, ಮಹೇಶ ಪಾಟೀಲ್, ಅಭಿಜಿತ ದೇಶಪಾಂಡೆ , ಶಾಂತಾ ಆಚಾರ್ಯ, ಕಿರಣ್, ಮುಂತಾದವರು ಅಭಿನಯಿಸಿದ್ದಾರೆ.

ವಿಶ್ವರಾಧ್ಯಕೋಟಿ ಛಾಯಾಗ್ರಹಣ , ಚಿತ್ರದ ಒನಲೈನ್ ಕಥೆಯನ್ನು ಸೂರಜ್ ದೇಸಾಯಿ ಬರೆದಿದ್ದಾರೆ. ಚಿತ್ರಕಥೆ, ಸಂಭಾಷಣೆಯನ್ನು, ಪ್ರವೀಣ ಸುತಾರ, ಮಹೇಶ ಪಾಟೀಲ, ಅಭಿಷೇಕ್ ದೇಸಾಯಿ ಬರೆದಿದ್ದಾರೆ. ಈಗಾಗಲೇ ಅನಾಮಿಕ, ಒಂದೊಳ್ಳೆ ಲವ್ ಸ್ಟೋರಿ ಚಿತ್ರಗಳನ್ನು ನಿರ್ದೇಶಿಸಿ ಗುರುತಿಸಿಕೊಂಡ ಪ್ರವೀಣ ಸುತಾರ ಚಿತ್ರವನ್ನು ಅಚ್ಚು ಕಟ್ಟಾಗಿ ನಿರ್ದೇಶನ ಮಾಡಿದ್ದಾರೆ. ಫ್ರಾಂಕ್ಲೀನ್ ರಾಕಿ ಸಂಗಿತ ನಿರ್ದೇಶನ, ಪ್ರಶಾಂತ ಶೇಬನ್ನವರ ಸಂಕಲನ , ಡಾ.ಪ್ರಭು ಗಂಜಿಹಾಳ ,ಡಾ.ವೀರೇಶ ಹಂಡಿಗಿ ಅವರ ಪತ್ರಿಕಾ ಸಂಪರ್ಕ ಚಿತ್ರಕ್ಕೆ ಇದೆ. ಸಧ್ಯದಲ್ಲೇ ಚಲನಚಿತ್ರವನ್ನು ಬಿಡುಗಡೆ ಗೊಳಿಸುವದಾಗಿ ನಿರ್ದೇಶಕ ಪ್ರವೀಣ ಸುತಾರ ತಿಳಿಸಿದ್ದಾರೆ.

ವರದಿ:-ಡಾ.ಪ್ರಭು ಗಂಜಹಾಳ . ಮೋ.ನಂ-9448775346

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.
Back to top button