ಸೂಲದಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ.

ಕಾನಾ ಹೊಸಹಳ್ಳಿ ಅಕ್ಟೋಬರ್.28

ಸಮೀಪದ ಸೂಲದಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು. ಈ ವೇಳೆ ಅಧ್ಯಕ್ಷರು, ಪಿಡಿಒ, ಸರ್ವ ಸದಸ್ಯರು ಶ್ರೀ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪೂಜೆ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಾರುತಿ ಮಾತನಾಡಿ ಜಗತ್ತಿಗೆ ರಾಮಾಯಣ ಪರಿಚಯಿಸಿದ ಮಹಾ ಸಂತ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಶುಭಾಶಯಗಳು ಕೋರಿದರು. ಮಾನವೀಯ ಗುಣಗಳನ್ನು ಮೈಗೂಡಿಸಿ ಕೊಳ್ಳುವುದು ಸೇರಿದಂತೆ ಉತ್ತಮ ಸಮಾಜ ನಿರ್ಮಾಣದ ಮಹತ್ವದ ಸಂಗತಿಗಳನ್ನು ರಾಮಾಯಣ ಮಹಾ ಕಾವ್ಯದಿಂದ ನಾವು ಕಲಿಯಬಹುದಾಗಿದೆ. ಜಾತಿ-ಧರ್ಮದ ಹೆಸರಿನಲ್ಲಿ ಮನುಷ್ಯ-ಮನುಷ್ಯರ ನಡುವಿನ ಸಂಬಂಧಗಳು ಕುಸಿಯುತ್ತಿರುವ ಪ್ರಸ್ತುತ ದಿನ ಮಾನಗಳಲ್ಲಿ ಆದಿ ಮಹರ್ಷಿ ವಾಲ್ಮೀಕಿ ಅವರು ರಚಿಸಿದ ಮಹಾ ಕಾವ್ಯ ದಾರಿ ದೀಪವಾಗಿ ತೋರುತ್ತದೆ ಎಂದು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಎನ್. ರತ್ನಮ್ಮ ದೊಡ್ಡರಾಮಪ್ಪ, ಸದಸ್ಯರು. ಕೆ. ಸಿದ್ದಪ್ಪ, ಕೆ ಚಿತ್ತಪ್ಪ, ಲಿಂಗನಗೌಡ್ರು, ಎನ್. ಮಾರಪ್ಪ , ಎಸ್. ಬಸಮ್ಮ ಬಸವರಾಜ್, ಎಸ್ ಪುಷ್ಪವತಿ ಬಸವರಾಜ್, ರೇವಣ್ಣ, ವೃಷಭೇಂದ್ರಪ್ಪ, ಪಿ ಸಿದ್ದಪ್ಪ ಹಾಗೂ ಬಿಲ್ ಕಲೆಕ್ಟರ್ ಕೆ ಸಿದ್ದಪ್ಪ, ಊರಿನ ಮುಖಂಡರಾದ ಜಿ ಮಾರೇಶ್, ನರಸಿಂಹಪ್ಪ, ಬಸವರಾಜ್, ಬೊಮ್ಮಣ್ಣ ಗ್ರಾ.ಪಂ ಸಿಬ್ಬಂದಿಗಳು, ವಾಲ್ಮೀಕಿ ಸಮಾಜದ ಮುಖಂಡರು ಹಾಗೂ ಗ್ರಾಮದ ಸಾರ್ವಜನಿಕರು ಇತರರು ಭಾಗವಹಿಸಿದ್ದರು.

ಹೋಬಳಿ ವರದಿಗಾರರು:ಕೆ.ಎಸ್.ವೀರೇಶ್. ಕಾನಾ ಹೊಸಹಳ್ಳಿ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.
Back to top button