ರಾಜ್ಯ ಪ್ರಶಸ್ತಿ ವಿಜೇತ ಡಿ. ಸಿದ್ದಪ್ಪ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರಿಂದ ಸನ್ಮಾನ.
ಬಿಸ್ನಹಳ್ಳಿ ಅಕ್ಟೋಬರ್.31

ಕೂಡ್ಲಿಗಿ ತಾಲೂಕಿನ ಹಾರಕಬಾವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಸ್ನಹಳ್ಳಿ ಗ್ರಾಮದ ದಳವಾಯಿ ಸಿದ್ದಪ್ಪ (ಹಂದಿ ಜೋಗಿ) ಇವರು ಬಯಲಾಟ, ಮೂಡಲು ಪಾಯ, ಯಕ್ಷಗಾನ ಕಲಾ ಕ್ಷೇತ್ರದಲ್ಲಿ ಮುಂಚೂಣಿಯ ಕಲಾವಿದರಾಗಿ 50 ವರ್ಷಗಳ ಕಾಲ ಸೇವೆಯನ್ನು ಸಲ್ಲಿಸಿದ ಶ್ರೀ ದಳವಾಯಿ ಸಿದ್ದಪ್ಪನವರನ್ನು ರಾಜ್ಯ ಸರ್ಕಾರ ಗುರುತಿಸಿ 2023ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ಹಿನ್ನೆಲೆ ವಿಜಯನಗರ ಜಿಲ್ಲಾ ಉಸ್ತುವರಿ ಸಚಿವರು ಬಿ ಜೆಡ್ ಜಮೀರ್ ಅಹ್ಮದ್ ಖಾನ್, ಹಾಗೂ ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ ಎನ್.ಟಿ ಶ್ರೀನಿವಾಸ್ ಅವರು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ಬಯಲಾಟ, ಮೂಡಲ ಪಾಯ ಕಲೆಯನ್ನು ಹಳ್ಳಿಗಳಲ್ಲಿ ಬೆಳೆಸಿದ ಬಿಸ್ನಸಳ್ಳಿ ಡಿ ಸಿದ್ದಪ್ಪ ಅವರ ಮನೆಗೆ ಭೇಟಿ ನೀಡಿ ಸಿದ್ದಪ್ಪ ಹಾಗೂ ಪತ್ನಿಗೆ ಸನ್ಮಾನಿಸಿದರು. ಈ ವೇಳೆ ಜಿಲ್ಲಾ ಉಸ್ತುವರಿ ಸಚಿವರು ಬಿ ಜೆಡ್ ಜಮೀರ್ ಅಹ್ಮದ್ ಖಾನ್ ಮಾತನಾಡಿ ಸಾಧನೆ ಸಾಧಕರ ಸೊತ್ತೇ ಹೊರತು ಸೋಮಾರಿಗಳದ್ದಲ್ಲ.

ನಾವು ಮಾಡುವ ಕೆಲಸದಲ್ಲಿ ನಂಬಿಕೆ ಇರಬೇಕು. ಇದಿದ್ದರೆ ನಾವು ಎತ್ತರಕ್ಕೆ ಬೆಳೆಯುತ್ತೇವೆ. ರಾಜ್ಯದಲ್ಲಿ ಬಯಲಾಟ, ಮೂಡಲಪಾಯ, ಯಕ್ಷಗಾನ ಕಲೆಗೆ ವಿಶೇಷ ಸ್ಥಾನವಿದ್ದು, ಉಳಿಸುವ ಕಾರ್ಯವಾಗಬೇಕು ಎಂದರು. ಈ ಸಂದರ್ಭದಲ್ಲಿ ಕೂಡ್ಲಿಗಿ ಶಾಸಕ ಡಾ ಶ್ರೀನಿವಾಸ್ ಎನ್ಟಿ ಮಾತನಾಡಿ ನಮ್ಮ ಕೂಡ್ಲಿಗಿ ತಾಲೂಕಿನಲ್ಲಿ 50 ವರ್ಷಗಳ ನಿರಂತರ ತಿರುಗಾಟ ನಡೆಸಿ ರಾಜ್ಯದಲ್ಲಿ ಬಯಲಾಟ, ಮೂಡಲಪಾಯ ಕಲೆಯನ್ನು ಕಟ್ಟಿ ಬೆಳೆಸಿ ಕಲೆಯನ್ನು ಕಲಿಸುತ್ತಾ ಹಳ್ಳಿಗಳಲ್ಲಿ ಕಲೆಯನ್ನು ಬೆಳೆಸುತ್ತಾ ಬಂದಿದ್ದಾರೆ. ನಿಮ್ಮ ಸೇವೆಯನ್ನು ಪರಿಗಣಿಸಿ ಕರ್ನಾಟಕ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿರುವುದು ತುಂಬಾ ಸಂತೋಷವಾಗಿದೆ. ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿರುವುದು ಅತ್ಯಂತ ಗೌರವದ ನಮ್ಮ ತಾಲೂಕಿಗೆ ಹೆಮ್ಮೆಯ ಸಂಗತಿಯಾಗಿದೆ. ಇಂದು ನವೆಂಬರ್ 1.ರಂದು ನಡೆಯುವ 64ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು, ಗ್ರಾಮ ಪಂಚಾಯಿತಿಯ ಅಧ್ಯಕ್ಷರು, ಸರ್ವ ಸದಸ್ಯರು, ಬಯಲಾಟ ಕಲಾವಿದರು ಅಭಿನಂದಿಸಿದರು.
ಹೋಬಳಿ ವರದಿಗಾರರು:ಕೆ.ಎಸ್.ವೀರೇಶ್. ಕಾನಾ ಹೊಸಹಳ್ಳಿ