ಮೊಳಕಾಲ್ಮೂರು ತಾಲೂಕಿನಲ್ಲಿ 68.ನೇ ಕನ್ನಡ ರಾಜ್ಯೋತ್ಸವವನ್ನು ಮಾನ್ಯ ಶಾಸಕರು ನೆರವೇರಿಸಿದರು.

ಮೊಳಕಾಲ್ಮುರು ನವೆಂಬರ್.1

ತಾಲೂಕು ಆಡಳಿತ,ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ ಇವರ ವತಿಯಿಂದ ಇಂದು ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಎನ್ ವೈ ಗೋಪಾಲಕೃಷ್ಣರವರು ಮೊಳಕಾಲ್ಮೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣ ಮೈದಾನದಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಕರ್ನಾಟಕವು ಏಕೀಕರಣದ ನಂತರ ಮೈಸೂರು ರಾಜ್ಯ ಎಂಬ ನಾಮಕರಣ ಗೊಂಡಿದ್ದ ನಮ್ಮ ರಾಜ್ಯವನ್ನು ಕರ್ನಾಟಕ ರಾಜ್ಯ ಎಂದು ಮರು ನಾಮಕರಣ ಮಾಡುವ ಮೂಲಕ ಕನ್ನಡದ ನೆಲದ ಸಂಸ್ಕೃತಿ ಅಸ್ಮಿತೆಯನ್ನು ಅಧಿಕೃತಗೊಳಿಸಿ ಸುಮಾರು 50 ವರ್ಷಗಳು ಸಂದಿರುವುದನ್ನು ಈ ಸಂದರ್ಭದಲ್ಲಿ ವಿಶೇಷವಾಗಿ ಸ್ಮರಿಸಲಾಯಿತು.ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಶ್ರೀಮತಿ ರೂಪ ಜಿಲ್ಲಾ ಪಂಚಾಯತಿ ಇಲಾಖೆ ಕೆ ನಾಗನಗೌಡ ದೇವಸಂದ್ರ ಕುಮಾರಸ್ವಾಮಿ ಪೋಲಿಸ್ ಇಲಾಖೆ ಪಾಂಡುರಂಗಪ್ಪ ಪಿಎಸ್ಐ ಗ್ರಾಮೀಣ ಕುಡಿಯುವ ನೀರು ಇಲಾಖೆ ಹರೀಶ್ ತಾಲೂಕು ಪಂಚಾಯತಿ ಇ.ಓ ಪ್ರಕಾಶ್ ತಾಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಮುಖಂಡರು, ಇನ್ನೂ ಹಲವು ಗಣ್ಯರು ಉಪಸ್ಥಿತರಿದ್ದರು. ಎಂದು ವರದಿಯಾಗಿದೆ.

ತಾಲೂಕ ವರದಿಗಾರರು:ತಿಪ್ಪೇಸ್ವಾಮಿ.ಹೊಂಬಾಳೆ. ಮೊಳಕಾಲ್ಮುರು

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.
Back to top button