ಶಿವಯೋಗಿ ಸಿದ್ಧರಾಮೇಶ್ವರ ಪ್ರಥಮ ಶ್ರೇಣಿಯ ವಚನಕಾರರು.

ಇಂಡಿ ಜನೇವರಿ.,15

ಹನ್ನೆರಡನೆಯ ಶತಮಾನದ ಪ್ರಥಮ ಶ್ರೇಣಿಯ ವಚನಕಾರರಲ್ಲಿ ಒಬ್ಬ. ಬಾಲ್ಯದಲ್ಲಿ ಕುರಿ ಕಾಯುವ ಕಾಯಕ. ಶ್ರೀಶೈಲಕ್ಕೆ ಹೋಗಿ ಮಲ್ಲಿಕಾರ್ಜುನನ ದರ್ಶನ ಪಡೆದ ಸಿದ್ದರಾಮ ಸೋಲಾಪುರಕ್ಕೆ ಬಂದು ದೇವಸ್ಥಾನ ನಿರ್ಮಿಸಿ ಕೆರೆ ಕಟ್ಟೆ ಕಾರ್ಯದಲ್ಲಿ ತೊಡಗಿದ ಕಾಯಕಯೋಗಿ ಎಂದು ಕಂದಾಯ ಉಪ ವಿಭಾಗಾಧಿಕಾರಿ ಅಬೀದ್ ಗದ್ಯಾಳ ಹೇಳಿದರು.ಪಟ್ಟಣದ ಮಿನಿ ವಿಧಾನ ಸೌಧದಲ್ಲಿ ತಾಲೂಕಾ ಆಡಳಿತ ವತಿಯಿಂದ ನಡೆದ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.ಪ್ರಭುದೇವ ಅವರನ್ನು ಕಲ್ಯಾಣಕ್ಕೆ ಕರೆದೊಯ್ದು ಚೆನ್ನ ಬಸವಣ್ಣ ನವರಿಂದ ಇಷ್ಟಲಿಂಗ ದೀಕ್ಷೆ ಕೊಡಿಸಿ ಅನುಭವ ಮಂಟಪ ಗೋಷ್ಠಿಯಲ್ಲಿ ಪಾಲ್ಗೊಂಡು ಮಹಾ ಶಿವಯೋಗಿಯಾದರು ಎಂದರು.ತಹಸೀಲ್ದಾರ ಬಿ.ಎಸ್.ಕಡಕಬಾವಿ, ಸಮಾಜ ಕಲ್ಯಾಣ ಅಧಿಕಾರಿ ಬಿ.ಜೆ.ಇಂಡಿ, ಕಜಾಪ ಅಧ್ಯಕ್ಷ ಆರ್.ವಿ.ಪಾಟೀಲ,ಪಿ.ಎಂ.ಮಠಪತಿ,ಎಂ ಪಿ.ಕೊಡತೆ,ಎಸ್ ಆರ್.ಮುಜಗೊಂಡ, ಶಿರಸ್ತೆದಾರ ಬಸವರಾಜ ರಾವೂರ,ಬಸವರಾಜ ಗೊರನಾಳ ಮತ್ತಿತರಿದ್ದರು.

ಜಿಲ್ಲಾ ವರದಿಗಾರರು:ಶಿವಪ್ಪ.ಬಿ.ಹರಿಜನ.ಇಂಡಿ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button