ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ಉಪಾಧ್ಯಕ್ಷರಾಗಿ ಕೆ.ಟಿ. ಮಲ್ಲಿಕಾರ್ಜುನ್.ಆಲೂರು ನೇಮಕ.
ಆಲೂರು ಫೆಬ್ರುವರಿ.28

ಕಾನ ಹೊಸಹಳ್ಳಿ ಸಮೀಪದ ಆಲೂರು ಗ್ರಾಮದ ಕೆ. ಟಿ.ಮಲ್ಲಿಕಾರ್ಜುನ ಆಲೂರು ಅವರನ್ನು ವಿಜಯನಗರ ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ಹಿಂದುಳಿದ ವರ್ಗಗಳ ಮೋರ್ಚಾ ಉಪಾಧ್ಯಕ್ಷರನ್ನಾಗಿ ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಈಟಿ ಲಿಂಗರಾಜ ನೇಮಿಸಿ ಆದೇಶ ಹೊರಡಿಸಿದ್ದಾರೆ. ಈ ವೇಳೆ ನೂತನ ವಿಜಯನಗರ ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ಹಿಂದುಳಿದ ವರ್ಗಗಳ ಮೋರ್ಚಾ ಉಪಾಧ್ಯಕ್ಷರಾಗಿ ಆಲೂರು ಕೆ. ಟಿ . ಮಲ್ಲಿಕಾರ್ಜುನ ಅಧಿಕಾರ ಸ್ವೀಕರಿಸಿ ಮಾತನಾಡಿ ಬಿಜೆಪಿ ಪಕ್ಷ ಕೊಟ್ಟ ಜವಾಬ್ದಾರಿಯನ್ನು ವಹಿಸಿಕೊಂಡು ಜಿಲ್ಲೆಯ ಹಳ್ಳಿ ಹಳ್ಳಿಗಳಿಗೆ ಹೋಗಿ ಎಲ್ಲಾ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದು ಕೊಂಡು ಪಕ್ಷವನ್ನು ಸಂಘಟಿಸುತ್ತೇನೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಜಿಲ್ಲೆಯ ಕ್ಷೇತ್ರಗಳಲ್ಲಿಯೂ ಬಿಜೆಪಿ ಹೆಚ್ಚಿನ ಮತಗಳಿಸಲು ಶ್ರಮಿಸುತ್ತೇನೆ ಎಂದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಸನ್ಮಾನಿಸಿ ಅಭಿನಂದಿಸಿದರು.
ಹೋಬಳಿ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಕೆ.ಎಸ್.ವೀರೇಶ್.ಕಾನಾ ಹೊಸಹಳ್ಳಿ