ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ದಿನಾಚರಣೆ ಆಚರಣೆ.
ತರೀಕೆರೆ ನವೆಂಬರ್.20
![](https://i0.wp.com/sknewskannada.in/wp-content/uploads/2023/11/IMG-20231120-WA0090.jpg?resize=708%2C531&ssl=1)
ದೇಶದ ಪ್ರಧಾನಿಯಾಗಿ ಜನ ಸಾಮಾನ್ಯರ ಪ್ರೀತಿ ಗೆದ್ದವರು ಜವಾಹರ್ ಲಾಲ್ ನೆಹರು ಎಂದು ಎಂ ಸಿ ಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ರಾಮೇಗೌಡರು ಹೇಳಿದರು. ಅವರು ಗ್ರಾಮದ ಅಂಬೇಡ್ಕರ್ ನಗರದ ಅಂಗನವಾಡಿ ಕೇಂದ್ರದಲ್ಲಿ ಏರ್ಪಡಿಸಿದ್ದ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದರು. ಮಕ್ಕಳ ದಿನಾಚರಣೆಯನ್ನು ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಆಚರಿಸಬೇಕು. ನೆಹರು ರವರ ವಿಚಾರಗಳನ್ನು ಮಕ್ಕಳಿಗೆ ತಿಳಿಸಬೇಕು ನಾನು ಅಂಗನವಾಡಿ ಕೇಂದ್ರದ ಎಲ್ಲಾ ಮಕ್ಕಳಿಗೂ ಸಹ ಸಮ ವಸ್ತ್ರಗಳನ್ನು ಕೊಡಿಸುವುದಾಗಿ ಹೇಳಿದರು. ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಅಲಮೇಲೂ ರವರು ಮಾತನಾಡಿ ಜವಾಹರಲಾಲ್ ನೆಹರು ಜನ್ಮದಿನವನ್ನು ನಾವೆಲ್ಲರೂ ಮಕ್ಕಳ ದಿನಾಚರಣೆ ಎಂದು ಆಚರಿಸುತ್ತಿದ್ದೇವೆ, ಈ ಸಂದರ್ಭದಲ್ಲಿ ಎಲ್ಲರಿಗೂ ಶುಭಾಶಯಗಳು ಎಂದು ಹೇಳಿದರು. ಅಂಗನವಾಡಿ ಕಾರ್ಯಕರ್ತೆ ಬಿಪಿ ಕಲಾ ಮಾತನಾಡಿ ಗ್ರಾಮಸ್ಥರ ಸಹಕಾರ ನನಗೆ ಈ ಕಾರ್ಯಕ್ರಮ ಆಯೋಜಿಸಲು ಪ್ರೇರಣೆಯಾಯಿತು ಎಂದು ಹೇಳಿದರು.ಗ್ರಾಮ ಪಂಚಾಯಿತಿ ಸದಸ್ಯರಾದ ರಂಗಸ್ವಾಮಿ ರವರು ಉಪಸ್ಥಿತರಿದ್ದರು.
ಜಿಲ್ಲಾ ವರದಿಗಾರರು:ಎನ್.ವೆಂಕಟೇಶ್.ತರೀಕೆರೆ