ಕುಲ ಬಾಂಧವರೆಲ್ಲಾ ಒಂದಾಗಿ ಕನಕ ಜಯಂತಿ ಆಚರಿಸೋಣ – ಜಿ.ಎಚ್. ಶ್ರೀ ನಿವಾಸ್.
ತರೀಕೆರೆ ನವೆಂಬರ್.21

ಪ್ರತಿ ವರ್ಷದಂತೆ ಈ ಬಾರಿಯೂ ಸಹ ಕನಕದಾಸರ ಜಯಂತಿಯನ್ನು ರಾಜ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಆಚರಿಸೋಣ ಎಂದು ಶಾಸಕರಾದ ಜಿಎಚ್ ಶ್ರೀನಿವಾಸ್ ಹೇಳಿದರು. ಅವರು ಇಂದು ಪಟ್ಟಣದ ತಾಲೂಕು ಆಡಳಿತ ಸೌಧದಲ್ಲಿ ನಾಡ ಹಬ್ಬಗಳ ಸಮಿತಿ ಅಧ್ಯಕ್ಷರಾದ ವಿ ಎಸ್ ರಾಜೀವ ರವರ ಅಧ್ಯಕ್ಷತೆಯಲ್ಲಿ ಕರೆಯಲಾಗಿದ್ದ, ಕನಕದಾಸರ ಜಯಂತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಕುಲ ಬಾಂಧವರೆಲ್ಲರೂ ಎಲ್ಲಾ ಸಮಾಜ ದವರೊಂದಿಗೆ ಒಂದಾಗಿ ಕನಕದಾಸರ ಜಯಂತಿ ಆಚರಿಸೋಣ ಎಂದು ಹೇಳಿದರು. ಕುರುಬ ಸಮಾಜದ ಅಧ್ಯಕ್ಷರಾದ ಡಿ ವಿ ಪದ್ಮರಾಜ್ ಮಾತನಾಡಿ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮಾಡೋಣ ಎಂದು ಹೇಳಿದರು. ಮಾಜಿ ಪುರಸಭಾ ಅಧ್ಯಕ್ಷರಾದ ಟಿ ಎಸ್ ರಮೇಶ್ ಮಾತನಾಡಿ ಗುರು ರೇವಣಸಿದ್ದೇಶ್ವರ ದೇವಸ್ಥಾನದಿಂದ ಮೆರವಣಿಗೆ ಪ್ರಾರಂಭಿಸ ಬೇಕು ಎಂದು ಹೇಳಿದರು. ಮಾಜಿ ಪುರಸಭಾ ಅಧ್ಯಕ್ಷರಾದ ಧರ್ಮರಾಜ್ ಮಾತನಾಡಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಮಾಜದ ಸಾಧಕರಿಗೆ ಸನ್ಮಾನಿಸಿ ಗೌರವಿಸ ಬೇಕು ಎಂದು ಹೇಳಿದರು. ಈ ಸಭೆಯಲ್ಲಿ ತಹಸಿಲ್ದಾರ್ ವಿ ಎಸ್ ರಾಜೀವ ರವರು ಮಾತನಾಡಿ ಯಾವುದೇ ಗೊಂದಲಗಳಿಗೆ ಆಸ್ಪದ ನೀಡದೆ, ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಸಹ ಭಾಗವಹಿಸ ಬೇಕು ಎಂದು ಹೇಳಿದರು. ಪುರಸಭಾ ಅಧ್ಯಕ್ಷರಾದ ಪರಮೇಶ್, ಪುರಸಭಾ ಮುಖ್ಯ ಅಧಿಕಾರಿ ಹೆಚ್ಚು ಪ್ರಶಾಂತ್ ರವರು ಉಪಸ್ಥಿತರಿದ್ದು, ಶಿರಸ್ತೆದಾರರಾದ ನಾಗೇಂದ್ರ ನಾಯಕ್ ರವರು ಸ್ವಾಗತಿಸಿ, ವಂದನಾರ್ಪಣೆ ಮಾಡಿದರು.
ಜಿಲ್ಲಾ ವರದಿಗಾರರು:ಎನ್.ವೆಂಕಟೇಶ್.ತರೀಕೆರೆ