ಎಂ.ಓ ಕೊಟ್ರಯ್ಶ ಎಂ.ಪಿ.ಎಂ.ಸಿ – ಸದಸ್ಯರಾಗಿ ಆಯ್ಕೆ.
ಕೊಟ್ಟೂರು ನ.06

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಸದಸ್ಯರನ್ನಾಗಿ ಶ್ರೀ ಕೊಟ್ರಯ್ಯ ಎಂ.ಓ ಬಿನ್ ನಂಜುಂಡಯ್ಯ ಜಂಗಮರ ಓಣಿ ಕೆ.ಅಯ್ಯನಹಳ್ಳಿ ಕೃಷಿಕ ಕ್ಷೇತ್ರದಲ್ಲಿ ನಾಮ ನಿರ್ದೇಶನ ಗೊಳಿಸಿ ಆದೇಶಿಸಲಾಯಿತು. ಈ ಸಂದರ್ಭದಲ್ಲಿ ದಾರುಕೇಶ್ ಕೊಟ್ಟೂರು ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಕೆ ಅಯ್ಯನಹಳ್ಳಿಯ ಕಾಂಗ್ರೆಸ್ ಮುಖಂಡರು ಗ್ರಾಮಸ್ಥರು ರೈತರು ಉಪಸ್ಥಿತರಿದ್ದರು.ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ಅಧಿನಿಯಮದ 1966 ಕಾಲಂ 10 ರಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈ ಒಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಸದಸ್ಯರನ್ನಾಗಿ ನಾಮ ನಿರ್ದೇಶನ ಮಾಡಲಾಯಿತು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಪ್ರದೀಪ್.ಕುಮಾರ್.ಸಿ.ಕೊಟ್ಟೂರು