ಪಿ.ಎಚ್.ಡಿ ಪದವಿ ಪಡೆದ ಮೇಘನ.ಜಿ
ಜುಮ್ಮೋಬನಹಳ್ಳಿ ಡಿಸೆಂಬರ್.3

ಮೇಘನ ಜಿ ಅವರು ಮೂಲತಃ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಜುಮ್ಮೋಬನಹಳ್ಳಿ ಗ್ರಾಮದವರು. ಇವರು ಗಾಣಿಗ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಇವರದ್ದು ಕೃಷಿ ಕುಟುಂಬ. ಅವರ ತಂದೆ ವೀರೇಶ, ತಾಯಿ ಶಾಂತವೀರಮ್ಮ. ಮೇಘನ ಅವರು ತಂದೆಯ ನಿಧನದ ನಂತರ ಕಾಟ್ರಹಳ್ಳಿಯ ದೊಡ್ಡಮ್ಮನ ಆಶ್ರಯದಲ್ಲಿ ಬೆಳೆದವರು. ಜುಮ್ಮೋಬನಹಳ್ಳಿ ಕುಗ್ರಾಮದಲ್ಲಿ ಶೈಕ್ಷಣಿಕ ವಾತಾವರಣ ಇರಲಿಲ್ಲ. ಆದರೆ, ಓದಬೇಕು ಎಂಬ ಆಸೆ ಇತ್ತು. ಪ್ರಾಥಮಿಕ ಶಿಕ್ಷಣವನ್ನು ಕೂಡ್ಲಿಗಿ ತಾಲೂಕಿನ ಕಾಟ್ರಹಳ್ಳಿ ಗ್ರಾಮದಲ್ಲಿ, ಮಾಧ್ಯಮಿಕ ಮತ್ತು ಪ್ರೌಢ ಶಿಕ್ಷಣವನ್ನು ನರಸಿಂಹನಗಿರಿಯಲ್ಲಿ ಕಾಲ್ನಡಿಗೆಯಲ್ಲಿ ದಿನಾಲು 2.ಕಿ ಮೀ ನಡೆದು ಹೋಗಿ ಹತ್ತನೇ ತರಗತಿಯನ್ನು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದರು. ಪಿಯುಸಿಯನ್ನು ಕೂಡ್ಲಿಗಿಯ ಹಿರೇಮಠ ಪದವಿ ಪೂರ್ವ ಕಾಲೇಜಿನಲ್ಲಿ ದಿನಾಲು ಬಸ್ಸಿನಲ್ಲಿ ಪ್ರಯಾಣಿಸಿ ಮುಗಿಸಿದರು. ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿಯಲ್ಲಿ ಅಕ್ಕನ ಮನೆಯಲ್ಲಿದ್ದು ಕೊಂಡು ಬಿಎ ಮೂರು ವರ್ಷಗಳ ಪದವಿಯನ್ನು ಡಿಸ್ಟಿಂಕ್ಷನ್ ನೊಂದಿಗೆ ಪಾಸಾದರು. ಎಂ.ಎ ಪದವಿಯನ್ನು ಕನ್ನಡ ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದಲ್ಲಿ ಪ್ರಥಮ ರ್ಯಾಂಕ್ ನೊಂದಿಗೆ ತೇರ್ಗಡೆಯಾಗಿ ನಂತರ ಪಿಎಚ್ ಡಿ ಪದವಿಯನ್ನು ಸಮಾಜಶಾಸ್ತ್ರ ವಿಷಯದಲ್ಲಿ ಪ್ರೊ ಕೆ ಎಂ ಮೇತ್ರಿ, ಹಿರಿಯ ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರು ಇವರ ಮಾರ್ಗದರ್ಶನದಲ್ಲಿ ಸಿದ್ಧಪಡಿಸಿದ “ಗಾಣಿಗ ಸಮುದಾಯದ ಸಮಾಜೋ-ಆರ್ಥಿಕ ಸ್ಥಿತಿಗತಿ” ಎಂಬ ವಿಷಯದ ಮಹಾ ಪ್ರಬಂಧಕ್ಕೆ ಕನ್ನಡ ವಿಶ್ವವಿದ್ಯಾಲಯವು ಪಿಎಚ್ ಡಿ ಪದವಿಯನ್ನು ನೀಡಿದೆ.
ಹೋಬಳಿ ವರದಿಗಾರರು:ಕೆ.ಎಸ್.ವೀರೇಶ್.ಕಾನಾ ಹೊಸಹಳ್ಳಿ