ಕುಂದಾಪುರ ಶಾಸಕ ಕಿರಣ್ ಕೊಡ್ಗಿ ಆಪ್ತ ನವೀನ್ ಚಂದ್ರ ಶೆಟ್ಟಿ ರಟ್ಟಾಡಿ ಪ್ರಕರಣ, ಕ್ಷೇತ್ರದಲ್ಲಿ ಮಹಿಳಾ ರಕ್ಷಣೆ ಯಾವಾಗ? – ಸಾರ್ವಜನಿಕರ ನೇರ ಪ್ರಶ್ನೆ.

ಉಡುಪಿ ಸ.05

ಧರ್ಮಸ್ಥಳದಲ್ಲಿ ‘ಧರ್ಮ ರಕ್ಷಣೆ’ಗಾಗಿ ನಡೆದ ಮಹತ್ವದ ಯಾತ್ರೆಯಲ್ಲಿ ಪಾಲ್ಗೊಂಡ ಕುಂದಾಪುರ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕೊಡ್ಗಿ ಅವರಿಗೆ, ಸ್ವತಃ ಅವರದೇ ಪಕ್ಷದ ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ನವೀನ್ ಚಂದ್ರ ಶೆಟ್ಟಿ ರಟ್ಟಾಡಿ ವಿರುದ್ಧ ಕೇಳಿ ಬಂದಿರುವ ಲೈಂಗಿಕ ದೌರ್ಜನ್ಯದ ಆರೋಪವು ತೀವ್ರ ಮುಜುಗರ ತಂದಿದೆ.

ಸಾರ್ವಜನಿಕರು ಈಗ ನೇರವಾಗಿ ಶಾಸಕರನ್ನು ಪ್ರಶ್ನಿಸುತ್ತಿದ್ದಾರೆ:-

“ತಮ್ಮದೇ ಕ್ಷೇತ್ರದಲ್ಲಿ ಹೆಣ್ಣುಮಕ್ಕಳ ಮೇಲೆ ದೌರ್ಜನ್ಯ ನಡೆದಾಗ ಅದನ್ನು ರಕ್ಷಿಸುವುದು ಯಾವಾಗ?”ಈ ಘಟನೆಯು ಸಾರ್ವಜನಿಕ ನೈತಿಕತೆ, ರಾಜಕೀಯ ಮತ್ತು ಕಾನೂನು ಸುವ್ಯವಸ್ಥೆಯ ಬಗ್ಗೆ ತೀವ್ರ ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ‘ಧರ್ಮ ರಕ್ಷಕ’ ಎಂದು ಗುರುತಿಸಿ ಕೊಂಡಿರುವ ನವೀನ್ ಚಂದ್ರ ಶೆಟ್ಟಿ ರಟ್ಟಾಡಿ ಅವರ ವಿರುದ್ಧ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಯತ್ನದ ಗಂಭೀರ ಆರೋಪ ಕೇಳಿ ಬಂದಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಮಾಜದಲ್ಲಿ ಗೌರವಯುತ ಸ್ಥಾನದಲ್ಲಿರುವ ವ್ಯಕ್ತಿಗಳು ಇಂತಹ ಅಪರಾಧಗಳನ್ನು ಎಸಗಿದಾಗ, ಅದು ಕಾನೂನಿನ ತತ್ವಗಳಿಗೆ ಮತ್ತು ಸಾರ್ವಜನಿಕ ನಂಬಿಕೆಗೆ ವಿರುದ್ಧವಾಗಿರುತ್ತದೆ.

ಕಾನೂನು ಪ್ರಕ್ರಿಯೆ ಮತ್ತು ನೈತಿಕ ಹೊಣೆಗಾರಿಕೆಗಳು:-

ಈ ಪ್ರಕರಣದಲ್ಲಿ ಭಾರತೀಯ ದಂಡ ಸಂಹಿತೆ (Indian Penal Code – IPC) ಅಡಿಯಲ್ಲಿ ಲೈಂಗಿಕ ದೌರ್ಜನ್ಯ ಯತ್ನವು ಗಂಭೀರ ಅಪರಾಧವಾಗಿದೆ. ಐಪಿಸಿ ಸೆಕ್ಷನ್ 354 (ಮಹಿಳೆಯರ ಘನತೆಗೆ ಧಕ್ಕೆ ತರುವ ಉದ್ದೇಶದಿಂದ ಲೈಂಗಿಕ ದೌರ್ಜನ್ಯ ಅಥವಾ ಕ್ರಿಮಿನಲ್ ಬಲ ಪ್ರಯೋಗ) ಅಡಿಯಲ್ಲಿ ಪ್ರಕರಣ ದಾಖಲಿಸ ಬಹುದಾಗಿದೆ.

ಎಫ್‌.ಐ.ಆರ್ ದಾಖಲು:-

ಸಂತ್ರಸ್ತೆಯು ಪೊಲೀಸ್ ಠಾಣೆಗೆ ದೂರು ನೀಡಿದಾಗ, ಪೊಲೀಸರು ತನಿಖೆ ಆರಂಭಿಸುತ್ತಾರೆ.

ತನಿಖೆ ಮತ್ತು ಬಂಧನ:-

ತನಿಖೆಯ ಸಂದರ್ಭದಲ್ಲಿ ಸಾಕ್ಷ್ಯಗಳ ಆಧಾರದ ಮೇಲೆ ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಲಾಗುತ್ತದೆ.

ಚಾರ್ಜ್‌ಶೀಟ್ ಮತ್ತು ವಿಚಾರಣೆ:-

ತನಿಖೆ ಪೂರ್ಣ ಗೊಂಡ ನಂತರ, ಚಾರ್ಜ್‌ಶೀಟ್ ಸಲ್ಲಿಸಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತದೆ. ಅಪರಾಧ ಸಾಬೀತಾದರೆ, ಕಾನೂನಿನ ಪ್ರಕಾರ ಆರೋಪಿಗೆ ಶಿಕ್ಷೆ ವಿಧಿಸಲಾಗುತ್ತದೆ.

ರಾಜಕೀಯ ಪ್ರಭಾವದ ಕುರಿತು ಪ್ರಶ್ನೆಗಳು:-

ಈ ಪ್ರಕರಣದಲ್ಲಿ ರಾಜಕೀಯ ಪ್ರಭಾವ ಮತ್ತು ಅಧಿಕಾರವು ನ್ಯಾಯಾಂಗದ ಪ್ರಕ್ರಿಯೆಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆಯೇ ಎಂಬ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಎದ್ದಿವೆ. ಯಾವುದೇ ರಾಜಕೀಯ ಅಥವಾ ಧಾರ್ಮಿಕ ಸ್ಥಾನಮಾನಗಳು ಕಾನೂನು ಪ್ರಕ್ರಿಯೆಯಲ್ಲಿ ಯಾವುದೇ ವಿನಾಯಿತಿಯನ್ನು ನೀಡುವುದಿಲ್ಲ. ‘ಕಾನೂನಿನ ಮುಂದೆ ಎಲ್ಲರೂ ಸಮಾನರು’ ಎಂಬ ತತ್ವವು ಈ ಪ್ರಕರಣದಲ್ಲಿಯೂ ಅನ್ವಯಿಸುತ್ತದೆ. ಧರ್ಮವನ್ನು ರಕ್ಷಿಸುವ ಬಗ್ಗೆ ಭಾಷಣ ಮಾಡುವ ನಾಯಕರು, ತಮ್ಮದೇ ಪಕ್ಷದ ಸದಸ್ಯರು ಇಂತಹ ಅಪರಾಧ ಎಸಗಿದಾಗ ಯಾವ ನಿಲುವು ತಳೆಯುತ್ತಾರೆ ಎಂಬುದನ್ನು ಸಾರ್ವಜನಿಕರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದು ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್ (ಮುಂದೈತಿ ಮಾರಿ ಹಬ್ಬ) ಸೂಕ್ಷ್ಮವಾಗಿ ಅವಲೋಕಿಸಿತ್ತದೆ.

ವರದಿ:ಆರತಿ.ಗಿಳಿಯಾರು.ಉಡುಪಿ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button