“ರಕ್ತ ಪರೀಕ್ಷೆ ಕಾರ್ಯಕ್ರಮ”

ಕೊಟ್ಟೂರು ಡಿಸೆಂಬರ್.6

ಕೊಟ್ಟೂರೇಶ್ವರ ಮಹಾವಿದ್ಯಾಲಯ ಹಾಗೂ ತಾಲೂಕು ಆರೋಗ್ಯ ಇಲಾಖೆ .ಕೊಟ್ಟೂರು ವತಿಯಿಂದ ರಕ್ತ ಪರೀಕ್ಷೆ ಕಾರ್ಯಕ್ರಮವನ್ನು ಬುಧವಾರ ದಂದು ಆಯೋಜಿಸಲಾಯಿತು. ಈ ಕಾರ್ಯಕ್ರಮಕ್ಕೆ ಕಾಲೇಜ್ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಸಿದ್ದರಾಮ ಕಲ್ಮಠ ಅವರು ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ಆರೋಗ್ಯದ ಮೇಲೆ ಪೂರಕ ವಾತಾವರಣವನ್ನು ಸೃಷ್ಟಿಸುತ್ತವೆ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯರಾದ ಡಾ. ಎಮ್ ರವಿಕುಮಾರ್. ಪದವಿ ಪೂರ್ವ ಪ್ರಾಂಶುಪಾಲರಾದ ಶ್ರೀ ಪ್ರಶಾಂತ್ ಕುಮಾರ್. ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಕೋರಿ ಬಸವರಾಜ್. ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ರಾಧಾ ಸ್ವಾಮಿ .ಕೆಪಿ . ಪದವಿ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಶಿವಕುಮಾರ್ ಹಾಗೂ ಪದವಿ ಪೂರ್ವ ದೈಹಿಕ ಶಿಕ್ಷಣ ನಿರ್ದೇಶಕರಾದ ಬಸವರಾಜ್ ಬಣಕರ್ , ಉಪನ್ಯಾಸಕರಾದ ಅನಿಲಕುಮಾರ ವಿದ್ಯಾರ್ಥಿ ಬೋಧಕ ಮತ್ತು ಬೋಧಕೇತರ ವರ್ಗ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ತಾಲೂಕ ವರದಿಗಾರರು:ಪ್ರದೀಪ್.ಕುಮಾರ್.ಸಿ ಕೊಟ್ಟೂರು

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.
Back to top button